ಚೆನ್ನೈ : ತಮಿಳುನಾಡಿನ ಕಲ್ಪಾಕಂ ಅಣುಸ್ಥಾವರದಲ್ಲಿ ಗುಂಡಿನ ದಾಳಿ ನಡೆದಿದ್ದು 3 ಸಾವನ್ನಪ್ಪಿದ್ದಾರೆ, ಇಬ್ಬರಿಗೆ ಗಂಭೀರ ಗಾಯಗಳುಂಟಾಗಿವೆ.
ಅ.8ರ ಬೆಳಗ್ಗೆ 5.30ಕ್ಕೆ ಈ ಘಟನೆ ನಡೆದಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿ.ಐ.ಎಸ್.ಎಫ್.ನ) ಕ್ಯಾಂಪ್ ನ ವಿಜಯ್ ಪ್ರತಾಪ್ ಸಿಂಗ್ ಎಂಬಾತ ಗುಂಡಿನ ದಾಳಿ ನಡೆಸಿದ್ದು, ತನ್ನ ಮೂವರು ಸಹೋದ್ಯೋಗಿಗಳನ್ನು ಹತೈಗೈದಿದ್ದಾನೆ. ಈ ಗುಂಡಿನ ದಾಳಿಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ವಿಜಯ್ ಪ್ರತಾಪ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯ್ ಪ್ರತಾಪ್ ಸಿಂಗ್ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು ಈ ಕೃತ್ಯಕ್ಕೆ ಕಾರಣ ಏನು ಎಂಬುದು ಸದ್ಯ ತಿಳಿದುಬಂದಿಲ್ಲ.