Untitled Document
Sign Up | Login    
Dynamic website and Portals
  
October 13, 2014

ಭಾರತದ ಮೇಲೆ ಆರೋಪಮಾಡಿ ವಿಶ್ವಸ್ಥೆಗೆ ಪಾಕ್ ಪತ್ರ

ಇಸ್ಲಾಮಾಬಾದ್ : ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಸೇನೆ ಪದೇ ಪದೆ ಕ್ಯಾತೆ ತೆಗೆಯುತ್ತಿದ್ದರೂ ತನ್ನ ತಪ್ಪನ್ನು ಮುಚ್ಚಿಟ್ಟುಕೊಂಡು, ಭಾರತವೇ ಕದನ ವಿರಾಮ ಉಲ್ಲಂಘನೆ ಮಾಡಿ, ಗುಂಡಿನ ದಾಳಿ ನಡೆದಿಸಿದೆ ಎಂದು ಪಾಕಿಸ್ತಾನ ವಿಶ್ವಸಸ್ಥೆಗೆ ಪತ್ರ ಬರೆದಿದೆ.

ಕಳೆದ ಕೆಲವು ವಾರಗಳಿಂದ ಭಾರತ ಉದ್ದೇಶಪೂರ್ವಕವಾಗಿ ಅಪ್ರಚೋದಿತ ಗುಂಡಿನ ದಾಳಿಗಳನ್ನು ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ ಎಂದು ಆಪಾದಿಸಿದೆ. ಇದರಿಂದ ಜಮ್ಮು-ಕಾಶ್ಮೀರ ಗಡಿ ನಿಯಂತ್ರಣ ರೇಖೆ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಭದ್ರತಾ ವ್ಯವಸ್ಥೆ ಹದಗೆಟ್ಟಿದೆ ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ರಾಷ್ಟ್ರೀಯ ಭದ್ರತೆ ಹಾಗೂ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಅವರಿಗೆ ಪತ್ರ ಬರೆದಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ವಿಶ್ವ ಸಂಸ್ಥೆ ಮಧ್ಯಪ್ರವೇಶ ಮಾಡಬೇಕು ಎಂದು ಪಾಕಿಸ್ತಾನ ಕೋರಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ, ಕಾಶ್ಮೀರದಲ್ಲಿ ಜನಮತ ಸಂಗ್ರಹಿಸಬೇಕು ಎಂದು ನಿರ್ಣಯ ಕೈಗೊಂಡಿದೆ. ಆದರೆ ಇದೂವರೆಗೂ ಜಾರಿಗೆ ಬಂದಿಲ್ಲ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಅ.1ರಿಂದ 10ರವರೆಗೆ ಭಾರತ 20 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿ ಗುಂಡಿನ ದಾಳಿ, ಶೆಲ್ ದಾಳಿಗಳನ್ನು ನಡೆಸಿದೆ. ಇದರಿಂದಾಗಿ ಪಾಕಿಸ್ತಾನದ 12 ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ದೂರಲಾಗಿದೆ.

ಈ ನಡುವೆ ವಿಶ್ವಸಂಸ್ಥೆಯು ಕಾಶ್ಮೀರ ವಿವಾದ ಇತ್ಯರ್ಥ ಮಾಡುವಲ್ಲಿ ವಿಫಲವಾಗಿದೆ ಇದು ವಿಶ್ವಸಂಸ್ಥೆ ವೈಫಲ್ಯಕ್ಕೊಂದು ಉತ್ತಮ ಉದಾಹರಣೆ. ಕಾಶ್ಮೀರಿ ಜನರು ವಿಶ್ವಸಂಸ್ಥೆ ಅವರಿಗೆ ನೀಡಿದ್ದ ಭರವಸೆ ಸಾಕಾರಗೊಳ್ಳಲಿದೆ ಎಂದು ಆಸೆಕಂಗಳಿಂದ ಕಾಯುತ್ತಲೇ ಇದ್ದಾರೆ ಎಂದು ಪಿಪಿಪಿ ಮುಖಂಡ ಬುಲಾವಲ್ ಭುಟ್ಟೋ ಕರಾಚಿ ಯುವ ಸಂಸತ್ ಅಧಿವೇಶನದಲ್ಲಿ ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited