Untitled Document
Sign Up | Login    
Dynamic website and Portals
  
October 13, 2014

ಹುಡ್ ಹುಡ್ ಚಂಡಮಾರುತ: ಹಾನಿಗೊಳಗಾದ ಪ್ರದೇಶಗಳಿಗೆ ನಾಳೆ ಪ್ರಧಾನಿ ಭೇಟಿ

ನರೇಂದ್ರ ಮೋದಿ ನರೇಂದ್ರ ಮೋದಿ

ನವದೆಹಲಿ : 'ಹುಡ್ ಹುಡ್ ಚಂಡಮಾರುತ'ದಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಅ.14ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಹುಡ್ ಹುಡ್ ಪೀಡಿತ ಪ್ರದೇಶ ವಿಶಾಖಪಟ್ಟಣಂಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಚಂಡಮಾರುತದಿಂದ ಹಾನಿಯಾದ ಪ್ರದೇಶಗಳನ್ನು ವೈಮಾನಿಕ ಸಮೀಕ್ಷೆ ಮೂಲಕ ಮೋದಿ ಪರಿಶೀಲಿಸಲಿದ್ದಾರೆ. ಹುಡ್ ಹುಡ್ ಚಂಡಮಾರುತದಿಂದ ಸುಮಾರು 10 ಸಾವಿರ ಕೋಟಿ ನಷ್ಟವಾಗಿದೆ ಎಂದು ತಿಳಿದು ಬಂದಿದೆ. ಸದ್ಯಕ್ಕೆ ಚಂಡಮಾರುತದ ಅಬ್ಬರ ತಗ್ಗಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಚಂಡಮಾರುತದ ಹಾನಿ ಬಗ್ಗೆ ಪ್ರತಿಕ್ರಿಯಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಏತನ್ಮಧ್ಯೆ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹುಡ್ ಹುಡ್ ಚಂಡಮಾರುತಕ್ಕೆ ಗುರಿಯಾಗಿರುವ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ ಚತ್ತೀಸ್ ಗಢ, ಮಧ್ಯಪ್ರದೇಶ ಮುಖ್ಯಮಂತ್ರಿಗಳೊಂದಿಗೆ ಸಂಪರ್ಕದಲ್ಲಿದ್ದು ಕರಾವಳಿ ಭಾಗದಲ್ಲಿ ಸಂಭವಿಸಿರುವ ನಷ್ಟವನ್ನು ಕೇಂದ್ರ ಸರ್ಕಾರ ಭರಿಸುವುದಾಗಿ ಭರವಸೆ ನೀಡಿದ್ದಾರೆ.

ಆಂದ್ರಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ ಸುಮಾರು 250,000 ಜನ, ಒರಿಸ್ಸಾದ 9ಜಿಲ್ಲೆಗಳಲ್ಲಿ 156,000 ಜನರನ್ನು ಈ ವರೆಗೂ ನಿರಾಶ್ರಿತರ ಶಿಬಿರಗಳಲ್ಲಿ ಇರಿಸಲಾಗಿದೆ. ಇನ್ನೂ ಹೆಚ್ಚು ಜನರನ್ನು ನಿರಾಶ್ರಿತ ಶಿಬಿರಗಳಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited