ಬೆಂಗಳೂರು : ಜನರ ಸಮಸ್ಯೆಗಳನ್ನು ಜಿಲ್ಲೆಗಳಲ್ಲೇ ಪರಿಹರಿಸಬೇಕು, ಅಧಿಕಾರಿಗಳು ಜನಧ್ರೋಹಿ ಕೆಲಸಗಳನ್ನು ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಇಲಾಖಾ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನರ ಸಮಸ್ಯೆಗಳನ್ನು ಜಿಲ್ಲೆಗಳಲ್ಲೇ ಬಗೆಹರಿಸಬೇಕು. ಪದೇ ಪದೇ ಅವರನ್ನು ಸರ್ಕಾರಿ ಕಛೇರಿಗಳಿಗೆ ಓಡಾಡಿಸಬಾರದು. ಕೆಲವು ಅಧಿಕಾರಿಗಳಿಗೆ ಜನರನ್ನು ಕಛೇರಿಗೆ ಓದಾಡಿಸುವ ಪರಿಪಾಠವಿದೆ ಎಂದರು.
ಸರ್ಕಾರಿ ಕೆಲಸಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು. ಜನಧ್ರೋಹಿ ಕೆಲಸಗಳನ್ನು ಅಧಿಕಾರಿಗಳು ಮಾಡಬಾರದು, ಸರಿಯಾಗಿ ಸರ್ಕಾರಿ ಕೆಲಸಗಳನ್ನು ನಿರ್ವಹಿಸದಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಗುವುದು ಎಂದು ಎಚ್ಚರಿಸಿದರು.
ಈ ವೇಳೆ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ರಾಜ್ಯದಲ್ಲಿ ಅವ್ಯಾತವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಮರಳು ಮಾಫಿಯಾ, ಅಕ್ರಮ ಗಣಿಗಾರಿಕೆ ತಡೆಗಟ್ಟಲು ಯಾವರೀತಿ ಕ್ರಮ ಕೈಗೊಂಡಿದ್ದೀರಾ ಎಂದು ಪ್ರಶ್ನಿಸಿದರು.
ಕೆಲ ಜಿಲ್ಲೆಗಳಲ್ಲಿ ಬರದ ಸಮಸ್ಯೆಯಿದೆ, ಇನ್ನುಕೆಲ ಜಿಲ್ಲೆಗಳಲ್ಲಿ ನೆರೆ ಹಾವಳಿ ಉಂಟಾಗಿದೆ. ಕೆಲ ಜಿಲ್ಲೆಗಳಲ್ಲಿ ಅಕ್ರಮ ಗಣಿಗಾರಿಕೆಯಿದೆ ಇಂತಹ ಸಮಸ್ಯೆಗಳನ್ನು ಜಿಲ್ಲೆಯಲ್ಲಿಯೇ ಪರಿಹಸಿಸಬಹುದು ರಾಜ್ಯದವರೆಗೂ ತೆಗೆದುಕೊಂಡುಬರುವ ಅಗತ್ಯವಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಅಧಿಕಾರಿಗಳ ನಿರ್ಲಕ್ಷ ನಮ್ಮ ಗಮನಕ್ಕೆ ಬರುತ್ತಲೇ ಇದೆ ಎಂದು ತರಾಟೆಗೆ ತೆಗೆದುಕೊಂಡರು.