ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ.
ಗಾಂಧಿ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಕ್ರಾರ್ಯಕ್ರಮದಲ್ಲಿ 9 ಗಣ್ಯರಿಗೆ ಆಂಧೋಲನದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದಾಗಿ ಹೇಳಿದ್ದರು. ಅವರಲ್ಲಿ ಶಶಿ ತರೂರ್ ಹೆಸರನ್ನು ನಿರ್ದೇಶನ ಮಾಡಿದ್ದರು.
ಮೋದಿಯವರ ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಶಶಿ ತರೂರ್ ಹಲವು ಭಾರೀ ಅವರನ್ನು ಶ್ಲಾಘಿಸಿದ್ದರು. ಇದು ಕೇರಳ ಕಾಂಗ್ರೆಸ್ ಘಟಕದ ಕಣ್ಣು ಕೆಂಪಗಾಗಿಸಿತ್ತು.
ಈ ನಿಟ್ಟಿನಲ್ಲಿ ಮೋದಿಯವರನ್ನು ಹೊಗಳದಂತೆ ತಾಕೀತು ಮಾಡಿದ್ದ ಕೇರಳ ಕಾಂಗ್ರೆಸ್ ಘಟಕ, ಶಶಿ ತರೂರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕಮಾಂಡ್ ಗೆ ದೂರು ನೀಡಿತ್ತು.
ಈ ಹಿನ್ನಲೆಯಲ್ಲಿ ಶಶಿ ತರೂರ್ ಅವರನ್ನು ಕಾಂಗ್ರೆಸ್ ವಕ್ತಾರ ಸ್ಥಾನದಿಂದ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.