ನವದೆಹಲಿ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಕಾಶ್ಮೀರ ವಿವಾದದಲ್ಲಿ ಮಧ್ಯಪ್ರವೇಶ ಮಾಡುವಂತೆ ಪಾಕಿಸ್ತಾನ ಕೋರಿದ್ದ ಮನವಿಯನ್ನು ವಿಶವಸಂಸ್ಥೆ ನಿರಕರಿಸಿದೆ.
ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡುವಂತೆ ಪಾಕಿಸ್ತಾನ ಕೋರಿತ್ತು. ಕಾಶ್ಮೀರ ವಿವಾದದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿರುವ ವಿಶವಸಂಸ್ಥೆ ವಿವಾದದ ಬಗ್ಗೆ ಪಾಕಿಸ್ತಾನ-ಭಾರತ ಎರಡೂ ದೇಶಗಳು ಪರಸ್ಪರ ಚರ್ಚೆ ನಡೆಸಿ, ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಿದೆ.
ಅಲ್ಲದೇ ಕಾಶ್ಮೀರ ವಿವಾದ ಅಂತರಾಷ್ತ್ರೀಯ ವಿವಾದವಲ್ಲ, ಉಭಯ ದೇಶಗಳ ನಡುವೆ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಕೆಲವು ವಾರಗಳಿಂದ ಭಾರತ ಉದ್ದೇಶಪೂರ್ವಕವಾಗಿ ಅಪ್ರಚೋದಿತ ಗುಂಡಿನ ದಾಳಿಗಳನ್ನು ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ ಎಂದೂ, ಇದರಿಂದ ಜಮ್ಮು-ಕಾಶ್ಮೀರ ಗಡಿಯಲ್ಲಿ ಭದ್ರತಾ ವ್ಯವಸ್ಥೆ ಹದಗೆಟ್ಟಿದೆ ಎಂದು ಆಪಾದಿಸಿ ಪಾಕಿಸ್ತಾನ ಪ್ರಧಾನ ಮಂತ್ರಿ ರಾಷ್ಟ್ರೀಯ ಭದ್ರತೆ ಹಾಗೂ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಅವರಿಗೆ ಪತ್ರ ಬರೆದಿದ್ದರು.
ವಿಶ್ವಸಂಸ್ಥೆ ಭದ್ರತಾ ಮಂಡಳಿ, ಕಾಶ್ಮೀರದಲ್ಲಿ ಜನಮತ ಸಂಗ್ರಹಿಸಬೇಕು ಎಂದು ನಿರ್ಣಯ ಕೈಗೊಂಡಿದೆ. ಆದರೆ ಇದೂವರೆಗೂ ಜಾರಿಗೆ ಬಂದಿಲ್ಲ. ಕಾಶ್ಮೀರ ವಿಚಾರದಲ್ಲಿ ವಿಶ್ವ ಸಂಸ್ಥೆ ಮಧ್ಯಪ್ರವೇಶ ಮಾಡಬೇಕು ಎಂದು ಪತ್ರದಲ್ಲಿ ಪಾಕಿಸ್ತಾನ ಕೋರಿತ್ತು.