ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲದಿದ್ದರೂ ಲೋಡ್ ಶೆಡ್ದಿಂಗ್ ಜಾರಿ ಮಾಡಲು ಹೊರಟಿರುವ ಇಂಧನ ಸಚಿವ ಡಿ.ಕೆ.ಶಿವಕುಮರ್ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮತನಾಡಿದ ಅವರು, ರಾಜ್ಯದಲ್ಲಿ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಅಭಾವವೂ ಇಲ್ಲ, ಇಂತಹ ಸಂದರ್ಭದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಮಾಡಿರುವುದು ಸರಿಯಲ್ಲ ಎಂದರು.
ಲೋಡ್ ಶೆಡ್ದಿಂಗ್ ಜಾರಿಮಾಡಿ, ಹೆಚ್ಚಿನ ಬೆಲೆಗೆ ವಿದ್ಯುತ್ ಖರಿದಿ ಮಾಡಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪುರ್ವಭಾವಿ ವೇದಿಕೆ ಸಜ್ಜುಗೊಳಿಸುತ್ತಿದ್ದಾರೆ. ಈ ರೀತಿ ಗೋಲ್ ಮಾಲ್ ಮಾಡುವ ಮೂಲಕ ರಾಜ್ಯದ ಜನರಿಗೆ ತೊಂದರೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.
2004-2014ವರೆಗೆ ನಡೆದ ವಿದ್ಯುತ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಿರುವ ಸದನ ಸಮಿತಿ ಅಧ್ಯಕ್ಷರನ್ನು ಬದಲಿಸಬೇಕು. ಡಿ.ಕೆ.ಶಿವಕುಮಾರ್ ಅವರನ್ನೇ ಸದನ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಇಂಧನ ಸಚಿವರೇ ಪ್ರಕರಣದ ತನಿಖೆ ನಡೆಸುವುದು ಸೂಕ್ತವಲ್ಲ ಈ ಬಗ್ಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದರು.
ಇದೇ ವೇಳೆ ಮಾಜಿ ಸಚಿವ ರಾಮ್ ದಾಸ್ ವಿರುದ್ಧದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಮ್ ದಾಸ್ ಪ್ರಕರಣವನ್ನು ಬಿಜೆಪಿ ಗಮನಿಸುತ್ತಿದೆ. ಸಧ್ಯಕ್ಕೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ತಿಳಿಸಿದರು.