ಮುಂಬೈ : ಲೋಕಸಭಾ ಚುನಾವಣೆ ವೇಳೆ ಶಿವಸೇನೆ ಬಿಜೆಪಿಗೆ ಬೆಂಬಲ ನೀಡದಿದ್ದರೆ ನರೇಂದ್ರ ಮೋದಿ ಇರಲಿ, ಅವರ ಅಪ್ಪ ದಾಮೋದರದಾಸ್ ಕೂಡ ಬಹುಮತಗಳಿಸಲು ಸಾಧ್ಯವಿರಲಿಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆದಿರುವ ಉದ್ಧವ್ ಠಾಕ್ರೆ, ಮೋದಿಯವರು ಸ್ವಂತ ಬಲದಿಂದ ಲೋಕಸಭಾ ಚುನಾವಣೆ ಗೆದ್ದಿಲ್ಲ, ಶಿವಸೇನೆ ಬೆಂಬಲದಿಂದ ಗೆಲುವು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಸ್ವಂತ ಬಲದಿಂದ ಗೆದ್ದಿಲ್ಲವಾದರೂ ಮೋದಿ ಪ್ರಧಾನಿಯಾಗುತ್ತಿದ್ದಂತೆಯೇ ಮಹಾರಾಷ್ಟ್ರದ ಶಿವಸೇನೆ ಪಕ್ಷವನ್ನು ಗುರುತಿಸಲಿಲ್ಲ ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ಹಾಗೂ ಎನ್ ಸಿಪಿಒ ಪಕ್ಷಗಳು ಸತ್ತ ಹಾವಿನಂತೆ, ಅವುಗಳಿಂದ ಯಾವುದೇ ರೀತಿಯ ಅಪಾಯವಿಲ್ಲ ಎಂದಿದ್ದಾರೆ.