ಬೀಜಿಂಗ್ : ಚೀನಾದ ಗಡಿಗೆ ಹೊಂದಿಕೊಂಡಂತಿರುವ ಅರುಣಾಚಲ ಪ್ರದೇಶದ ಮ್ಯಾಕ್ ಮೋಹನ್ ಗಡಿರೇಖೆ ಬಳಿ ರಸ್ತೆ ನಿರ್ಮಾಣದ ಭಾರತಸರ್ಕಾರದ ಪ್ರಸ್ತಾಪಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಗಡಿಯಲ್ಲಿನ ಶಾಂತಿ ಕದಡುವ ಯತ್ನಕ್ಕೆ ಭಾರತ ಕೈಹಾಕದೇ ಇರುವುದು ಒಳಿತು ಎಂದು ಚೀನಾ ಭಾರತಕ್ಕೆ ಎಚ್ಚರಿಕೆ ನೀಡಿದೆ.
ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯ ಮಾಗೋ-ತಿಂಗ್ಬುವಿನಿಂದ ಚಾಂಗ್ಲಾಂಗ್ ಜಿಲ್ಲೆಯ ವಿಜಯನಗರದವರೆಗೆ 2000 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಭಾರತದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ತಿಳಿಸಿದ್ದರು. ಗಡಿಯಲ್ಲಿ ಮೂಲಸೌಕರ್ಯದ ಗುಣಮಟ್ಟ ಹೆಚ್ಚಿಸಲು ಈ ನಿರ್ಧಾರ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಚೀನಾ ವಿದೇಶಾಂಗ ಇಲಾಖೆ ವಕ್ತಾರ ಹಾಂಗ್ ಲೀ, ಉಭಯರಾಷ್ಟ್ರಗಳ ನಡುವಿನ ಗಡಿ ವಿವಾದ ಇನ್ನೂ ಬಗೆಹರಿದಿಲ್ಲ ಹೀಗಿರುವಾಗ ಭಾರತ ಗಡಿಯಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದು ಸರಿಯಲ್ಲ. ಗಡಿಯಲ್ಲಿ ಶಾಂತಿ ಮಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರುವುದು ಉಭಯ ರಾಷ್ಟ್ರಗಳ ಕರ್ತವ್ಯ. ಹೀಗಾಗಿ ಭಾರತ ಗಡಿಯಲ್ಲಿ ಶಾಂತಿ ಕದಡುವ ಕೆಲಸಕ್ಕೆ ಮುಂದಾಗುವುದಿಲ್ಲ ಎಂದು ನಂಬಿದ್ದೇವೆ ಎಂದಿದ್ದಾರೆ.
ವಿಚಿತ್ರವೆಂದರೆ ಚೀನಾ ಈಗಾಗಲೇ ಅರುಣಾಚಲಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಟಿಬೆಟ್ ನಲ್ಲಿ ಅತ್ಯುತ್ತಮ ಗುಣಮಟ್ಟದ ಸರ್ವಋತು ರೈಲು ಹಾಗೂ ರಸ್ತೆ ಸಂಪರ್ಕ ಅಭಿವೃದ್ಧಿಪಡಿಸಿದೆ. ಅನಿವಾರ್ಯ ಸಂದರ್ಭಗಳಲ್ಲಿ ಗಡಿಯಲ್ಲಿ ತ್ವರಿತವಾಗಿ ಸೇನೆ ನಿಯೋಜಿಸಲು ಅಗತ್ಯವಾದ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಆದರೆ ಚ್ರಸ್ತೆ ನಿರ್ಮಾಣದ ಭಾರತದ ಪ್ರಸ್ತಾಪಕ್ಕೆ ಮಾತ್ರ ಆಕ್ಷೇಪ ವ್ಯಕ್ತಪಡಿಸುತ್ತಿದೆ.
ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯ ಮಾಗೊ-ತಿಂಗ್ಬುವಿನಿಂದ ಚಾಂಗ್ಲಾಂಗ್ ಜಿಲ್ಲೆಯ ವಿಜಯನಗರದವರೆಗೆ 2000 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಭಾರತ ಚಿಂತನೆ ನಡೆಸಿಉದೆ ಎಂದು ಅ.15ರಂದು ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿಕೆ ನೀಡಿದ್ದರು. ಗಡಿಯಲ್ಲಿ ಮೂಲಸೌಕರ್ಯದ ಗುಣಮಟ್ಟ ಹೆಚ್ಚಿಸಲು ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಅವರು ತಿಳಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೀನಾದ ವಿದೇಶಾಂಗ ಇಲಾಖೆ ವಕ್ತಾರ ಹಾಂಗ್ ಲೀ ಉಭಯ ರಾಷ್ಟ್ರಗಳ ನಡುವಿನ ಗಡಿ ವಿವಾದ ಇನ್ನೂ ಬಗೆಹರಿದಿಲ್ಲ, ಹೀಗಿರುವಾಗ ಭಾರತ ಸರ್ಕಾರ ಗಡಿಯಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿರುವುದು ಸರಿಯಲ್ಲ, ಗಡಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರುವುದು ಉಭಯ ರಾಷ್ಟ್ರಗಳ ಕರ್ತವ್ಯ. ಈ ನಿಟ್ಟಿನಲ್ಲಿ ಭಾರತ ಶಾಂತಿ ಕದಡುವ ಕೆಲಸಕ್ಕೆ ಮುಂದಾಗುವುದಿಲ್ಲ ಎಂದು ನಂಬಿದ್ದೇವೆ ಎಂದು ಹೇಳಿದ್ದರು.
ವಿಚಿತ್ರವೆಂದರೆ ಚೀನಾ ಈಗಾಗಲೇ ಅರುಣಾಚಲ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಟಿಬೆಟ್ ನಲ್ಲಿ ಅತ್ಯುತ್ತಮ ಗುಣಮಟ್ಟದ ಸರ್ವಋತು ರೈಲು ಹಾಗೂ ರಸ್ತೆ ಸಂಪರ್ಕ ಅಭಿವೃದ್ಧಿಪಡಿಸಿದೆ. ಅನಿವಾರ್ಯ ಸಂದರ್ಭಗಳಲ್ಲಿ ಗಡಿಯಲ್ಲಿ ತ್ವರಿತವಾಗಿ ಸೇನೆ ನಿಯೋಜಿಸಲು ಅಗತ್ಯವಾದ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಆದರೆ ರಸ್ತೆ ನಿರ್ಮಾಣದ ಭಾರತದ ಪ್ರಸ್ತಾಪಕ್ಕೆ ಆಕ್ಷೇಪವ್ಯಕ್ತಡಿಸಿದೆ.