ಜಮ್ಮು-ಕಾಶ್ಮೀರ : 'ಪಾಕಿಸ್ತಾನ' ಸೈನಿಕರು ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಬಿ.ಎಸ್.ಎಫ್ ಯೋಧರ ಕ್ಯಾಂಪ್ ಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಿಗ್ಗೆ 5.30 ರ ವೇಳೆಗೆ ಪಾಕ್ ಸೈನಿಕರು ಆರ್.ಎಸ್ ಪುರ ಹಾಗೂ ಪೂಂಚ್ ಸೆಕ್ಟರ್ ಬಳಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ಭಾರತೀಯ ಸೇನಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿ ಪಾಕಿಸ್ತಾನ ಸೈನಿಕರು ಗಡಿ ಭಾಗದಲ್ಲಿ ದಾಳಿ ನಡೆಸುತ್ತಿದ್ದಾರೆ. ಶತೃಪಡೆಯ ಸೈನಿಕರು ಬಳಸುತ್ತಿರುವ ಶಸ್ತ್ರಾಸ್ತ್ರಗಳಿಗೆ ಸಮನಾದ ಶಸ್ತ್ರಾಸ್ತ್ರಗಳನ್ನು ಬಳಸಿ ಭಾರತೀಯ ಸೈನಿಕರು ದಾಳಿ ನಡೆಸುತ್ತಿದ್ದಾರೆ.
ಶುಕ್ರವಾರ ರಾತ್ರಿಯೂ ಗಡಿ ಭಾಗದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಅ.6ರಿಂದ ನಡೆಯುತ್ತಿರುವ ದಾಳಿಯಲ್ಲಿ 65ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಸುಮಾರು 30,000 ಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ.