ನವದೆಹಲಿ : ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ.
ಬೆಳಿಗ್ಗೆ 8ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನ 11ಗಂಟೆ ವೇಳೆಗೆ ಚಿತ್ರಣ ಹೊರ ಬೀಳಲಿದೆ. ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕಾಂಗ್ರೆಸ್ ಮೈತ್ರಿ ಕೂಟದ ಆಡಳಿತವಿದ್ದು, ಉಭಯ ರಾಜ್ಯಗಳಲ್ಲೂ ಅಧಿಕಾರ ಕಳೆದುಕೊಳ್ಳಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ.
288 ಸದಸ್ಯ ಬಲದ ಮಹಾರಾಷ್ಟ್ರ ಹಾಗೂ 90 ಸ್ಥಾನಗಳನ್ನು ಹೊಂದಿರುವ ಹರ್ಯಾಣದಲ್ಲಿ ಅ.15ರಂದು ಚುನಾವಣೆ ನಡೆದಿತ್ತು. ಇತ್ತೀಚಿನ ವರದಿ ಪ್ರಕಾರ ಮಹಾರಾಷ್ಟ್ರದಲ್ಲಿ ಬಿಜೆಪಿ 126 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 46, ಶಿವಸೇನೆ 62, ಎನ್ ಸಿಪಿ 40, ಎಂ ಎನ್ ಎಸ್ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
ಹರ್ಯಾಣದಲ್ಲಿ ಬಿಜೆಪಿ 52 ಸ್ಥಾನನಗಳಲ್ಲಿ ಮುನ್ನಡೆ ಯಲ್ಲಿದೆ. ಕಾಂಗ್ರೆಸ್ 17, ಐ ಎನ್ ಎಲ್ ಡಿ 15, ಹೆಚ್ ಜೆ ಸಿ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಉಭಯ ರಾಜ್ಯಗಳಲ್ಲಿಯೂ ಸಧ್ಯ ಕಾಂಗ್ರೆಸ್ ಹಿನ್ನಡೆಯಲ್ಲಿದೆ.
ಕಾರಟ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಹಿನ್ನಡೆ ಸಾಧಿಸಿದ್ದಾರೆ, ಇನ್ನು ಹರ್ಯಾಣ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಕೂಡ ಮುನ್ನಡೆ ಕಾಯ್ದುಕೊಂಡಿದ್ದಾರೆ.