ಲಖ್ನೌ : 'ಉತ್ತರ ಪ್ರದೇಶ' ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಪಾಲ ರಾಮ್ ನಾಯಕ್ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದು, ವ್ಯಾಪ್ತಿ ಮೀರಿ ವರ್ತಿಸದಂತೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಪಾಲರು ವ್ಯಾಪ್ತಿ ಮೀರಿ ವರ್ತಿಸಿದರೆ ಸರ್ಕಾರವೂ ತನ್ನ ವ್ಯಾಪ್ತಿ ಮೀರಬೇಕಾಗುತ್ತದೆ ಎಂದು ಅಖಿಲೇಶ್ ಯಾದವ್ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ರಾಜ್ಯಪಾಲರು ಆರ್.ಎಸ್.ಎಸ್ ಕೈಗೊಂಬೆಯಂತೆ ವರ್ತಿಸದಂತೆ ಸಿ.ಎಂ ತಾಕೀತು ಮಾಡಿದ್ದಾರೆ.
ರಾಜ್ಯಪಾಲ ರಾಮ್ ನಾಯಕ್, ಆರ್.ಎಸ್.ಎಸ್ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘ ಪರಿವಾರದ ಕೈಗೊಂಬೆಯಂತೆ ರಾಜ್ಯಪಾಲರು ವರ್ತಿಸಬಾರದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.