Untitled Document
Sign Up | Login    
Dynamic website and Portals
  
October 21, 2014

ವರಿಷ್ಠರ ವಿರುದ್ಧ ಹೇಳಿಕೆ ನೀಡದಂತೆ ಪರಮೇಶ್ವರ್ ಸೂಚನೆ

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್

ಬೆಂಗಳೂರು : ಪಕ್ಷದ ಮುಖಂಡರ ವಿರುದ್ಧ ಯಾವುದೇ ಹೇಳಿಕಗಳನ್ನು ನೀಡದಂತೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಫರ್ಮಾನು ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮತನಾಡಿದ ಅವರು, ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಸಚಿವರು ಅತೃಪ್ತಿ ಹೊರಹಾಕಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಪಕ್ಷದ ಸಚಿವರು, ಶಾಸಕರು, ಯಾರೇ ಆಗಲಿ ಕಾಂಗ್ರೆಸ್ ಹಿರಿಯನಾಯಕರ ವಿರುದ್ಧ ಯಾವುದೇ ಹೇಳಿಕಗಳನ್ನು ನೀಡಬಾರದು. ಅದರಲ್ಲಿಯೂ ಮುಖ್ಯವಾಗಿ ಎಐಸಿಸಿ ಅಧ್ಯಕ್ಷರು, ಉಪಾಧ್ಯಕ್ಷರ ಕುರಿತು ಹೇಳಿಕೆಗಳನ್ನು ನೀಡಬೇಡಿ ಎಂದು ಸೂಚಿಸಿದರು.

ಸಚಿವರಿಗೆ, ಶಾಸಕರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಪಕ್ಷದ ವೇದಿಕೆಯಿದೆ. ಇಲ್ಲವಾದಲ್ಲಿ ತಮ್ಮ ಬಳಿ ನೇರವಾಗಿ ಬಂದು ಅಭಿಪ್ರಾಯಗಳನ್ನು ವ್ಯಕ್ತಪಡಿಸಿಬಹುದು ಹೊರತು ಬಹಿರಂಗವಾಗಿ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವಂತಿಲ್ಲ ಎಂದು ತಾಕೀತು ಮಾಡಿದ್ದಾರೆ.

ಸಚಿವರಾದ ಹೆಚ್.ಆಂಜನೇಯ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಈಗಾಗಲೇ ಇಂತಹ ಹೇಳಿಕೆ ನೀಡದಂತೆ ಸೂಚಿಸಿರುವಾದಿ ತಿಳಿಸಿದರು.

ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋಲುಕಂಡ ಹಿನ್ನಲೆಯಲ್ಲಿ ಕಾಂಗ್ರೆಸ್ ರಾಜ್ಯ ನಾಯಕರು ವರಿಷ್ಠರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಅಸಮರ್ಥ ನಾಯಕರನ್ನು ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಸಮರ್ಥ ನಾಯಕರಿಗೆ ಹೊಣೆಗಾರಿಕೆ ನೀಡಬೇಕು ಎಂಬ ರೀತಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ಟ್ವಿಟ್ ಮಾಡಿದ್ದರು.

ಕೊಪ್ಪಳದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ, ಕಾಂಗ್ರೆಸ್ ನಿಂದ ಕತ್ತೆ ಸ್ಪರ್ಧಿಸಿದರೂ 25 ಸಾವಿರ ಮತ ಬರುತ್ತದೆ ಎಂಬ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ರಾಜಕೀಯ ಪಕ್ಷವೊಂದನ್ನು ಮುನ್ನಡೆಸಲು ಸಾಮರ್ಥ್ಯಕ್ಕಿಂತ ಗಂಭೀರತೆ ಮುಖ್ಯ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹೆಚ್ ವಿಶ್ವನಾಥ್ ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರಿಗೆ ಪರಮೇಶ್ವರ್, ವರಿಷ್ಠರ ವಿರುದ್ಧ ಹೇಳಿಕೆ ನೀಡದಂತೆ ಫರ್ಮಾನು ಮಾಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited