ನವದೆಹಲಿ : ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರ ರಾವ್ ಅವರನ್ನು ಕರ್ನಾಟಕ ಬಿಜೆಪಿ ಉಸ್ತುವಾರಿಯನ್ನಗಿ ನೇಮಕ ಮಾಡಿದ್ದಾರೆ.
ಈ ಮೂಲಕ ಈ ವರೆಗೆ ಕರ್ನಾಟಕ ಬಿಜೆಪಿ ಉಸ್ತುವಾರಿಗಾದ್ದ ಥಾವರಚಂದ್ ಗೆಹ್ಲೋಟ್ ಅವರ ಸ್ಥಾನಕ್ಕೆರಾವ್ ಅವರನ್ನು ನೇಮಕ ಮಾಡಲಾಗಿದೆ. ಆಂಧ್ರಪ್ರದೇಶ ಮೂಲದವರಾದ ರಾವ್ ಉತ್ತಮ ಸಂಘಟನಾ ಚತುರರು ಎಂದು ಹೆಸರುವಾಸಿಯಾಗಿದ್ದು, ಗೆಹ್ಲೋಟ್ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಹಿನ್ನಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಉಸ್ತುವಾರಿಯಾಗಿದ್ದ ಓಂ ಮಾಥುರ್ ಅವರನ್ನು ಉತ್ತರ ಪ್ರದೇಶಕ್ಕೆ ಮತ್ತು ರಾಜೀವ್ ಪ್ರತಾಪ್ ರೂಢಿ ಅವರನ್ನು ತಮಿಳುನಾಡು ಹಾಗೂ ಆಂಧ್ರಪ್ರದೇಶಕ್ಕೆ ನಿಯೋಜಿಸಲಾಗಿದೆ.
ಜೆ.ಪಿ.ನಡ್ಡಾ ಅವರನ್ನು ರಾಜಸ್ಥಾನ, ದಿಯು-ದಮನ್ ಹಾಗೂ ದಾದ್ರಾ ನಗರ್ ಹವೇಲಿಗೆ ಯುವ ನಾಯಕಿ ಪೂನಂ ಮಹಾಜನ್, ಮಧ್ಯಪ್ರದೇಶಕ್ಕೆ ವಿನಯ ಸಹಸ್ರಬುದ್ಧೆ ಅವರನ್ನು ನೇಮಕ ಮಾಡಲಾಗಿದೆ.