Untitled Document
Sign Up | Login    
Dynamic website and Portals
  
October 22, 2014

ನಿತಿನ್ ಗಡ್ಕರಿ ಸಿ.ಎಂ ಆಗದಿದ್ದರೆ ರಾಜೀನಾಮೆ ನೀಡುವೆ-ಮಹಾ ಬಿಜೆಪಿ ಶಾಸಕನ ಬೆದರಿಕೆ

ಮುಂಬೈ : 'ಮಹಾರಾಷ್ಟ್ರ' ಮುಖ್ಯಮಂತ್ರಿಯಾಗುವಂತೆ ನಿತಿನ್ ಗಡ್ಕರಿ ಅವರಿಗೆ ಬಿಜೆಪಿ ಶಾಸಕರಿಂದ ಒತ್ತಡ ಹೆಚ್ಚಾಗುತ್ತಿದೆ.

ದೇವೇಂದ್ರ ಫಡ್ನವೀಸ್ ಹೆಸರು ಮುಂಚೂಣಿಯಲ್ಲಿರುವುದರಿಂದ ಶಾಸಕರು ನಿತಿನ್ ಗಡ್ಕರಿ ಅವರನ್ನು ಸಿ.ಎಂ ಆಗುವಂತೆ ಒತ್ತಾಯಿಸುತ್ತಿದ್ದಾರೆ. ನಾಗ್ಪುರದ ಈಶಾನ್ಯ ವಲಯದ ಶಾಸಕ ಕೃಷ್ಣ ಖೋಪ್ಡೆ, ನಿತಿನ್ ಗಡ್ಕರಿ ಅವರೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಬೇಕೆಂದು ಪಟ್ಟು ಹಿಡಿದಿದ್ದಾರೆ.

ನಿತಿನ್ ಗಡ್ಕರಿ ಅವರೇ ಸಿ.ಎಂ ಆಗುವುದಾದರೆ, ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸಲು ಗಡ್ಕರಿ ಅವರಿಗೆ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಡುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ಗಡ್ಕರಿ ಅವರನ್ನು ಸಿ.ಎಂ ಮಾಡದೇ ಇದ್ದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಕೇಂದ್ರ ಸಚಿವ ಗಡ್ಕರಿ ಅವರನ್ನು ಭೇಟಿ ಮಾಡಿದ್ದ ವಿದರ್ಭ ಪ್ರದೇಶದ 39 ಶಾಸಕರು, ಮುಖ್ಯಮಂತ್ರಿಯಾಗುವಂತೆ ಒತ್ತಾಯ ಮಾಡಿದ್ದರು. ಆದರೆ ಶಾಸಕರ ಬೇಡಿಕೆಯನ್ನು ತಿರಸ್ಕರಿಸಿದ್ದ ಕೇಂದ್ರ ಸಚಿವರು ನಾನು ದೆಹಲಿಯಲ್ಲೇ ಸಂತಸದಿಂದ ಇದ್ದೇನೆ, ರಾಜ್ಯ ರಾಜಕಾರಣಕ್ಕೆ ಮರಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದೊರೆಯದೇ ಇರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆ ವಿಳಂಬವಾಗಿದೆ. ಇದೀಗ ಮುಖ್ಯಮಂತ್ರಿ ಆಯ್ಕೆಯೂ ಸಹ ಕಗ್ಗಂಟಾಗಿ ಪರಿಣಮಿಸುವ ಸಾಧ್ಯತೆ ಇದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited