ಜೈಪುರ : ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಪಟಾಕಿ ಮಳಿಗೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 7ಜನ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮಾರ್ ನಲ್ಲಿ ನಡೆದಿದೆ.
ಅಗ್ನಿಗೆ ಆಹಿತಿಯಾಗಿರುವ ಮಳಿಗೆಯಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಮಳಿಗೆಯ ಬಾಗಿಲು ಮುಚ್ಚಿದ್ದರ ಪರಿಣಾಮ ಒಳಗಿದ್ದ ಮಳಿಗೆಯ ಮಾಲಿಕರ ಕುಟುಂಬ ಸದಸ್ಯರು ಹಾಗೂ ಇಬ್ಬರು ಮಾರಾಟಗಾರರು ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದ್ದು ಉಸಿರುಕಟ್ಟಿ ಮಳಿಗೆಯಲ್ಲಿದ್ದ ಜನರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.
ಪ್ರತಿ ದೀಪಾವಳಿ ಸಂದರ್ಭದಲ್ಲೂ ಇಂತಹ ಅಗ್ನಿ ಅನಾಹುತ ಸಂಭವಿಸುತ್ತಿದ್ದರೂ ಪಟಾಕಿ ವ್ಯಾಪಾರಿಗಳು ಶಾರ್ಟ್ ಸರ್ಕ್ಯೂಟ್ ಅಥವಾ ಬೆಂಕಿ ಅವಘಡ ಸಂಭವಿಸಲು ಕಾರಣವಾಗುವ ಅಂಶಗಳನ್ನು ನಿಲರ್ಕಕ್ಷಿಸುತ್ತಿರುವುದು ಈ ಸಾಲಿನ ದೀಪಾವಳಿಯಲ್ಲಿ ನಡೆದಿರುವ ಅಪಘಾತ ಪ್ರಕರಣಗಳ ಮೂಲಕ ಸ್ಪಷ್ಟವಾಗುತ್ತದೆ.