ಶ್ರೀನಗರ : ಜಮ್ಮು-ಕಾಶ್ಮೀರ ಪುನರ್ವಸತಿಗಾಗಿ ಪ್ರಧಾನಿ ನರೇಂದ್ರ ಮೋದಿ 570 ಕೋಟಿ ರೂ ಪರಿಹಾರ ಘೋಷಿಸಿದ್ದಾರೆ.
ಸಿಯಾಚಿನ್ ಗೆ ಭೇಟಿ ನೀಡಿದ ಬಳಿಕ ಜಮ್ಮು-ಕಾಶ್ಮೀರಕ್ಕೆ ತೆರಳಿದ ಪ್ರಧಾನಿ ಮೋದಿ, ಪ್ರವಾಹ ಸಂತ್ರಸ್ತರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಭೀಕರ ಪ್ರವಾಹದಿಂದ ನಲುಗಿರುವ ಜಮ್ಮು-ಕಾಶ್ಮೀರ ಪುನರ್ವಸತಿಗಾಗಿ 570 ಕೋಟಿ ರೂ ಪರಿಹಾರ ಘೋಷಿಸಿದರು.
ರಾಜ್ಯದಲ್ಲಿ 6 ಆಸ್ಪತ್ರೆಗಳ ನಿರ್ಮಾಣಕ್ಕಾಗಿ 175 ಕೋಟಿ ರೂ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ಸಂತ್ರಸ್ತರ ಮಕ್ಕಳ ವಿದ್ಯಾಸಭ್ಯಾಸಕ್ಕೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಭರವಸೆ ನೀಡಿದ್ದಾರೆ.
ಶ್ರೀನಗರದಲ್ಲಿ ಪ್ರಧಾನಿ ಮೋದಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಲಿದ್ದಾರೆ.