Untitled Document
Sign Up | Login    
Dynamic website and Portals
  
October 26, 2014

ಎನ್.ಡಿ.ಎ ಸಂಸದರಿಗೆ ಪ್ರಧಾನಿ ಮೋದಿ ಚಹಾಕೂಟ

ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ : ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ತಾಕೀತು ಮಾಡಿದ್ದಾರೆ.

ಎನ್‌.ಡಿ.ಎ ಮೈತ್ರಿಕೂಟದ ಸಂಸದರಿಗೆ ಪ್ರಧಾನಿ ನರೇಂದ್ರ ತಮ್ಮ ನಿವಾಸದಲ್ಲಿ ಚಹಾಕೂಟವನ್ನು ಏರ್ಪಡಿಸಿದ್ದರು. ಎನ್‌.ಡಿ.ಎ ಮೈತ್ರಿಕೂಟದ ಎಲ್ಲ ಮಿತ್ರ ಪಕ್ಷಗಳು ಚಹಾಕೂಟದಲ್ಲಿ ಪಾಲ್ಗೊಂಡಿದ್ದವು. ಶಿವಸೇನೆಯ ಎಲ್ಲಾ ಸಂಸದರೂ ಚಹಾಕೂಟದಲ್ಲಿ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸುವಂತೆ ಸೂಚಿಸಿದ್ದಾರೆ. ಅಲ್ಲದೇ ಯೋಜನೆಗಳ ಜಾರಿಗೆ ಎಲ್ಲರೂ ಶ್ರಮಿಸುವಂತೆ ಸೂಚಿಸಿದ್ದಾರೆ.

ಇದೇ ವೇಳೆ ಜನ್ ಧನ್ ಯೋಜನೆ ಹಾಗೂ ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಧಾನಿಯವರಿಗೆ ಮಾಹಿತಿ ನೀಡಿದರು.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕಸರತ್ತು ನಡೆಸಿರುವ ಬಿಜೆಪಿಗೆ ಈ ಚಹಾಕೂಟ ಮಹತ್ವದ್ದಾಗಲಿದೇ ಎಂದೇ ಹೇಳಲಾಗಿತ್ತು. ಈ ನಡುವೆ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಜೆ.ಪಿ.ನಡ್ಡಾ ನೇತೃತ್ವದ ವೀಕ್ಷಕರ ತಂಡ ಅ.28ಕ್ಕೆ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited