ಬೆಂಗಳೂರು : ವೈದ್ಯರ ಜತೆ ಮಾತುಕತೆಗೆ ಸರ್ಕಾರ ಸಿದ್ಧವಿದೆ, ಸರ್ಕಾರಿ ವೈದ್ಯರು&id=16045'>ಸರ್ಕಾರಿ ವೈದ್ಯರು ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು ತಮ್ಮ ಸಮಸ್ಯೆಗಳ ಬಗ್ಗೆ ನೇರವಾಗಿ ಬಂದು ಮಾತನಾಡಲಿ. ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜೀನಾಮೆ ನೀಡುವುದು ಸರಿಯಲ್ಲ ಎಂದರು.
ಸಚಿವ ಯು.ಟಿ.ಖಾದರ್ ಅವರಿಗೆ ಜವಾಬ್ದಾರಿ ವಹಿಸಲಾಗಿದ್ದು, ಈಗಾಗಲೇ ಸಚಿವರು ವೈದ್ಯರಿಗೆ ಮಾತುಕತೆಗೆ ಆಹ್ವಾನಿಸಿದ್ದಾರೆ. ಪ್ರತಿಯೊಂದಕ್ಕೂ ರಾಜೀನಾಮೆ ಪರಿಹಾರವಲ್ಲ, ಬೇಡಿಕೆಗಳನ್ನು ಈಡೇರಿಸಲು ಕಾನೂನಿನ ರೀತಿ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಗುದು ಎಂದು ತಿಳಿಸಿದರು.
ಈ ನಡುವೆ ಆರೋಗ್ಯ ಸಚಿವ ಯು.ಟಿ.ಖಾದರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ವಿಕಾಸಸೌಧದಲ್ಲಿ ಸಭೆ ನಡೆಸಿದ್ದು, ಮುಖ್ಯಮಂತ್ರಿಗಳ ಭೇಟಿ ಬಳಿಕ ವೈದ್ಯಾಧಿಕಾರಿಗಳ ಜತೆ ಸಭೆ ಮುಂದುವರೆಯಲಿದೆ.