ನವದೆಹಲಿ : ಕೆ.ಎಸ್.ಈಶ್ವರಪ್ಪನವರಿಗೆ ನಾಗರಿಕತೆ, ಸಂಸ್ಕೃತಿ ಎಂಬುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈಶ್ವರಪ್ಪ ನೀಡಿದ ಹೇಳಿಕೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದರು.
ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಈಶ್ವರಪ್ಪನವರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪದಿಸಿದ್ದ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿ, ಗೃಹ ಸಚಿವರ ಮಕ್ಕಳ ಮೇಲೆ ಅತ್ಯಾಚಾರವಾದರೆ ಸುಮ್ಮನಿರುತಿದ್ದರೆ ಎಂದು ಪ್ರಶ್ನಿಸಿದ್ದರು.
ಈಶ್ವರಪ್ಪನವ ಈ ಹೇಳಿಕೆ ಖಂಡಿಸಿ ಬೆಂಗಳೂರು ಹಾಗೂ ಶಿವಮೊಗ್ಗದಲ್ಲಿನ ಈಶ್ವರಪ್ಪ ನಿವಾಸದ ಎಡುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದರು.