Untitled Document
Sign Up | Login    
Dynamic website and Portals
  
November 8, 2014

ಅತ್ಯಾಚಾರ ಪ್ರಕರಣ: ಕಾಂಗ್ರೆಸ್ ನಾಯಕನಿಂದ ವಿವಾದಾತ್ಮಕ ಹೇಳಿಕೆ

Mangalore : ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ರಾಜಕೀಯ ನಾಯಕರು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರಂತ. ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಬೆನ್ನಲ್ಲೆ ಈಗ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ರೇಪ್ ಕುರಿತ ವಾಗ್ದಾಳಿ ನಡೆಸಿದ್ದಾರೆ

ಮಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರ ಹೆಂಡತಿಯ ಮೇಲೆ ರೇಪ್‌ ನೆಡೆದಿದ್ರೆ ಎನಾಗ್ತಿತ್ತು ಎಂದು ಹೇಳುವ ಮೂಲಕ ವಿವಾದ ಸೃಷ್ಠಿಸಿದ್ದಾರೆ.

ಈಶ್ವರಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಗಳು, ಗೃಹ ಸಚಿವ ಕೆ.ಜೆ.ಜಾರ್ಜ್‌ ಅವರ ಮಗಳ ಮೇಲೆ ಅತ್ಯಾಚಾರವಾದರೆ ಇವರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಕೇಳಿದ್ದರು. ಈಶ್ವರಪ್ಪನವರ ಹೆಂಡತಿ ಮೇಲೆಯೇ ರೇಪ್ ಆದ್ರೆ ಏನಾಗುತ್ತೆ ಅಂತ ನಾನು ಕೇಳಿದ್ರೆ ಇವರು ಸುಮ್ಮನಿರುತ್ತಾರೆಯೇ ಎಂದು ವಾಗ್ದಾಳಿ ನಡೆಸಿದರು.

ಯಾರೂ ಬೇಕು ಅಂತ ರೇಪ್ ಮಾಡುವುದಿಲ್ಲ, ಈಶ್ವರಪ್ಪ ತಮ್ಮ ನಾಲಿಗೆ ಬಿಗಿಹಿಡಿದು ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.

ಒಟ್ಟಿನಲ್ಲಿ ಈಶ್ವರಪ್ಪನವರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿರುವಾಗಲೇ ಈಗ ಕಾಂಗ್ರೆಸ್ ನಾಯಕನ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಇಂತಹ ವಿಚಾರಗಳನ್ನು ರಾಜಕೀಯ ದುರುದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವುದು ವಿಪರ್ಯಾಸ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited