Mangalore : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಸಮಸ್ಯೆ ಜಟಿಲವಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ವಜುಭಾಯ್ ವಾಲ ತಿಳಿಸಿದ್ದಾರೆ.
ನ.10ರಂದು ಮಂಗಳೂರಿನಲ್ಲಿ ಮಾತನಾಡಿದ ರಾಜ್ಯಪಾಲರು, ರಾಜ್ಯದಲ್ಲಿ ಪ್ರತಿದಿನ ನಡೆಯುವ ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ. ಸರ್ಕಾರದಿಂದ ಪ್ರತಿನಿತ್ಯ ಮಾಹಿತಿ ದೊರೆಯುತ್ತದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಈ ವಿಷಯದಲ್ಲಿ ಸಧ್ಯಕ್ಕೆ ತಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ರಾಜ್ಯಪಾಲರು ಸ್ಪಷ್ಟಪಡಿಸಿದ್ದಾರೆ.
ಕಾನೂನಿಗೆ ಧಕ್ಕೆಯುಂಟಾಗಿ ರಾಜ್ಯದಲ್ಲಿರುವ ಸಮಸ್ಯೆಗಳು ಜಟಿಲವಾದರೆ ಸಿ.ಎಂ ಸಿದ್ದರಾಮಯ್ಯ ಅವರನ್ನು ಕರೆದು ಚರ್ಚೆ ನಡೆಸುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ.
ಅತ್ಯಾಚಾರ, ಕೊಲೆ, ದರೋಡೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿರೋಧ ಪಕ್ಷ ಬಿಜೆಪಿ ನಾಯಕರು ರಾಜ್ಯಪಾಲ ವಜುಭಾಯ್ ವಾಲ ಅವರಿಗೆ ದೂರು ನೀಡಿದ್ದರು.