Untitled Document
Sign Up | Login    
Dynamic website and Portals
  
November 11, 2014

ಶೋಭಾ ಕರಂದ್ಲಾಜೆ ಅವರ ತೇಜೋವಧೆ ಮಾಡದಂತೆ ಕಾಂಗ್ರೆಸ್ ಗೆ ಎಚ್ಚರಿಕೆ

ಸಂಸದೆ ಶೋಭಾ ಕರಂದ್ಲಾಜೆ ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು : 'ತೀರ್ಥಹಳ್ಳಿ'ಯ ನಂದಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಟೀಕೆ ಮಾಡಿರುವುದಕ್ಕೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ, ಶೋಭಾ ಕರಂದ್ಲಾಜೆ ಅವರ ತೇಜೋವಧೆ ಮಾಡುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ನಾಯಕರು ಆಡಿರುವ ಮಾತುಗಳನ್ನು ಹಿಂಪಡೆಯುವಂತೆ ಆಗ್ರಹಿಸಿದೆ. ಅಲ್ಲದೇ ಮುಂದೆ ಅವಹೇಳನಕಾರಿಯಾಗಿ ಮಾತನಾಡಿದರೆ ಕಾನೂನು ಮೊರೆ ಹೋಗುವುದಾಗಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಿದೆ.

ತೀರ್ಥಹಳ್ಳಿಯ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಸಚಿವ ಕಿಮ್ಮನೆ ರತ್ನಾಕರ ಅವರು ಹಸ್ತಕ್ಷೇಪ ಮಾಡುತ್ತಿದ್ದು, ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಸಿ.ಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರ ದುರ್ವರ್ತನೆಗೆ ಶೋಭಾ ಕರಂದ್ಲಾಜೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ನಾಯಕರು ಸಂಸದೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited