ಬೆಂಗಳೂರು : ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿರುದ್ಧ ಕಲಾವಿದರ ಸಂಘದ ಸದಸ್ಯರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಉಮಾಶ್ರೀ ಅವರ ವಿರುದ್ಧ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಕಲಾವಿದರ ಸಂಘದ ಸದಸ್ಯರು ತೇಜಸ್ವಿನಿ ಗೌಡ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಮಾಜಿ ಸಂಸದೆ ತೇಜಸ್ವಿನಿ ಗೌಡ ಸಚಿವೆ ಉಮಾಶ್ರೀ ವಿರುದ್ಧ ಟೀಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಲಾವಿದರ ಸಂಘದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದ ಮೂಲಕ ಮಾಜಿ ಪ್ರಧಾನಿಯನ್ನು ಸೋಲಿಸಿ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡವರು ಇಂದು ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಉಮಾಶ್ರೀ ಅವರಿಗೆ ಟಾಂಗ್ ನೀಡಿದ್ದ ತೇಜಸ್ವಿನಿ ಗೌಡ, ಉಮಾಶ್ರೀಯವರನ್ನು ನಾನು ಸ್ಟಾರ್ ಅಂದುಕೊಂಡಿರಲಿಲ್ಲ ಬದಲಾಗಿ ಓರ್ವ ಕಲಾವಿದೆ ಅಂದುಕೊಂಡಿದ್ದೆ ಎಂದಿದ್ದರು. ಅಷ್ಟೇ ಅಲ್ಲದೇ ಕಾಂಗ್ರೆಸ್ ನಲ್ಲಿ ಪುರುಷ ರಾಜಕಾರಣಿಗಳಿಗೆ ಸಂತಸವಾಗುವ ರೀತಿಯಲ್ಲಿ ಹೇಳಿಕೆ ನೀಡಿದರೆ ಮಾತ್ರ ಭವಿಷ್ಯವಿದೆ. ಉಮಾಶ್ರೀ ಅವರನ್ನು ಮಾತ್ರ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿದ್ದು ಉಳಿದ ಮಹಿಳಾ ನಾಯಕರಿಯರನ್ನು ಕಾಂಗ್ರೆಸ್ ನಲ್ಲಿ ಕಡೆಗಣಿಸಲಾಗುತ್ತಿದೆ ಎಂದು ತೇಜಸ್ವಿನಿ ಗೌಡ ಆರೋಪಿಸಿದ್ದರು.
ಉಮಾಶ್ರೀ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದ ಹಿನ್ನೆಯಲ್ಲಿ ಕಲಾವಿದರಿಗೆ ಅಪಮಾನವಾಗಿದೆ ಎಂದು ಕಲಾವಿದರ ಸಂಘದ ಕಾರ್ಯಕರ್ತರು ಆರೋಪಿಸಿದ್ದಾರೆ.