ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ನಿಲ್ಲುವವರೆಗೂ ಪಾಕಿಸ್ತಾನ&id=16263'>ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಕೆ ಸಿಂಗ್ ಹೇಳಿದ್ದಾರೆ.
ಗಡಿಯಲ್ಲಿ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ&id=16263'>ಪಾಕಿಸ್ತಾನ, ತನ್ನೊಂದಿಗೆ ಭಾರತ ದ್ವಿಪಕ್ಷೀಯ ಮಾತುಕತೆ ನಡೆಸದಂತಹ ಪರಿಸ್ಥಿತಿ ನಿರ್ಮಿಸಿದೆ. ಗುಂಡಿನ ದಾಳಿ ಹಾಗೂ ಮಾತುಕತೆ ಎರಡೂ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ ಎಂಬುದನ್ನು ಪಾಕಿಸ್ತಾನ&id=16263'>ಪಾಕಿಸ್ತಾನಕ್ಕೆ ಈಗಾಗಲೇ ಸ್ಪಷ್ಟವಾಗಿ ತಿಳಿಸಿದ್ದೇವೆ. ಆದರೂ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆಯಾಗುತ್ತಿದೆ ಎಂದು ವಿ.ಕೆ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಲಡಾಖ್ ನಲ್ಲಿ ಚೀನಾ ಸೇನೆ ಅತಿಕ್ರಮಣದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಿಂಗ್, ಕಳೆದ ಬಾರಿ ಚೀನಾ ಅಧ್ಯಕ್ಷರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ವಿಷಯದ ಬಗ್ಗೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ. ಅಲ್ಲದೇ ಇತ್ತೀಚೆಗಷ್ಟೇ ಮಾಯನ್ಮಾರ್ ನಲ್ಲಿ ನಡೆದ ಉಭಯ ನಾಯಕರ ಭೇಟಿಯಲ್ಲೂ ನರೇಂದ್ರ ಮೋದಿ ಲಡಾಖ್ ನಲ್ಲಿ ಚೀನಾ ಸೇನೆಯ ಅತಿಕ್ರಮಣದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಮಾತುಕತೆಯ ಫಲಿತಾಂಶಕ್ಕಾಗಿ ಕಾದು ನೋಡಬೇಕಿದೆ ಎಂದು ಹೇಳಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ನ.25ರಂದು ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿರುವುದರಿಂದ ಪಕ್ಷದ ಮುಖಂಡರೊಂದಿಗೆ ಚರ್ಚಿಸಲು ವಿ.ಕೆ ಸಿಂಗ್ ಶ್ರೀನಗರಕ್ಕೆ ಭೇಟಿ ನೀಡಿದ್ದರು.