ನವದೆಹಲಿ : 'ಐಪಿಎಲ್' ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಸಿಸಿಐ ನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ನ್ಯಾ.ಮುದ್ಗಲ್ ಸಮಿತಿ ಕ್ಲೀನ್ ಚಿಟ್ ನೀಡಿದೆ.
ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ನ್ಯಾ.ಮುದ್ಗಲ್ ಸಮಿತಿ, ನ.17ರಂದು ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿದ್ದು, ಹಗರಣದಲ್ಲಿ, ಬೆಟ್ಟಿಂಗ್ ಪ್ರಕರಣದಲ್ಲಿ ಶ್ರೀನಿವಾಸನ್ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ ಬೆಟ್ಟಿಂಗ್ ಹಾಗೂ ಫಿಕ್ಸಿಂಗ್ ಬಗ್ಗೆ ಐ.ಪಿ.ಎಲ್ ಆಡಳಿತ ಮಂಡಳಿಗೆ ಅರಿವಿತ್ತು. ಆದರೆ ಕ್ರಮ ಕೈಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಸಮಿತಿ ತಿಳಿಸಿದೆ.
ನ್ಯಾ.ಮುಕುಲ್ ಮುದ್ಗಲ್ ಸಮಿತಿ ವರದಿಯಿಂದಾಗಿ ಶ್ರೀನಿವಾಸನ್ ಗೆ ಸ್ವಲ್ಪ ರಿಲೀಫ್ ದೊರೆತಿದೆ. ನ.20ಕ್ಕೆ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆ ನಡೆಯಲಿದ್ದು ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಮತ್ತೊಮ್ಮೆ ಸ್ಪರ್ಧಿಸಲು ಸಾಧ್ಯವಾಗಿದೆ.
ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ನ್ಯಾ. ಮುಕುಲ್ ಮುದ್ಗಲ್ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ನೀಡಿರುವ ವರದಿಯನ್ನು ನ.17ರಂದು ಸುಪ್ರೀಂಕೋರ್ಟ್ ಬಹಿರಂಗಪಡಿಸಿದೆ.
ರಾಜಸ್ಥಾನ ರಾಯಲ್ಸ್ ತಂಡದ ಸಹ ಮಾಲೀಕರಾಗಿರುವ ರಾಜ್ ಕುಂದ್ರಾ, ಗುರುನಾಥ್ ಮೇಯಪ್ಪನ್, ಐಪಿಎಲ್ ಸಿ.ಇ.ಒ ಸುಂದರ್ ರಾಮನ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಬಗ್ಗೆ ಮುದ್ಗಲ್ ಸಮಿತಿ ನೀಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಐಪಿಎಲ್ 6ನೇ ಆವೃತ್ತಿಯಲ್ಲಿ ಸುಂದರ್ ರಾಮನ್, ರಾಜ್ ಕುಂದ್ರಾ, ಗುರುನಾಥ್ ಮೇಯಪ್ಪನ್ ಅವರು ಬುಕ್ಕಿಗಳೊಂದಿಗೆ ಸಂಪರ್ಕವಿಟ್ಟುಕೊಂಡಿದ್ದರು