Untitled Document
Sign Up | Login    
Dynamic website and Portals
  
November 20, 2014

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಶೋಭಾ ಕರಂದ್ಲಾಜೆ ಪೊಲೀಸರ ವಶಕ್ಕೆ

ಬೆಂಗಳೂರು : ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಬಿಜೆಪಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಪೊಲಿಸರು ಬಂಧಿಸಿದ್ದಾರೆ.

ಸಂಪುಟದಲ್ಲಿರುವ ನಾಲ್ವರು ಸಚಿವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ಈ ನಾಲ್ವರು ಸಚಿವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಪೊಲೀಸರು, ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರಿಗೆ ಅವಕಾಶ ನಿರಾಕರಿಸಿದರು.

ಈ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಪಾಲಿಕೆ ಸದಸ್ಯರು ಗಾಂಧಿ ಪ್ರತಿಮೆ ಬಳಿ ಮುನ್ನುಗ್ಗಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಧರಣಿಗೆ ಕುಳಿತರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಶೋಭಾ ಕರಂದ್ಲಾಜೆ ನಡುವೆ ವಾಗ್ವಾದ ಆರಂಭವಾಗಿ, ಪೊಲಿಸರು ಶೋಭಾ ಕರಂದ್ಲಾಜೆ ಹಾಗೂ ಪಾಲಿಕೆ ಸದಸ್ಯರನ್ನು ವಶಕ್ಕೆ ಪಡೆದುಕೊಂಡರು.

ವಿಧಾನಸೌಧದ ಬಳಿ ಪ್ರತಿಭಟನೆಗೆ ಅವಕಾಶ ನೀಡದ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಬನ್ನಪ್ಪ ಪಾರ್ಕ್ ನತ್ತ ಪ್ರತಿಭಟನಾ ಮೆರವಣಿಗೆಯೊಂದಿಗೆ ತೆರಳಿದರು. ಮಧ್ಯದಾರಿಯಲ್ಲಿಯೇ ಬಿಜೆಪಿ ನಾಯಕರನ್ನು ಪೊಲೀಸರು ತಡೆದಾಗ ಸ್ಥಳದಲ್ಲಿಯೇ ಪ್ರತಿಭಟನೆ ಕುಳಿತ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸರ್ಕಾರದ ವಿರುದ್ಧ ಕಿಡಿಕಾರಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸರ್ಕಾರ ಭ್ರಷ್ಟರಪರ ನಿಂತಿದೆ. ಭ್ರಷ್ಟ ಸಚಿವರಿಗೆ ಮಣೆಹಾಕಿದೆ ಎಂದು ಗುಡುಗಿದ್ದಾರೆ. ರಾಜ್ಯದಲ್ಲಿ ಅತ್ಯಾಚಾರ ಹೆಚ್ಚಾಗುತ್ತಿದೆ. ಮರಳು ಧಂದೆ ಮಿತಿ ಮೀರಿದೆ. ಇಷ್ಟಾಗ್ಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನೆ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗ ಬಿಜೆಪಿಗೆ ಪ್ರತಿಭಟನೆಗೆ ಅವಕಾಶ ನೀಡದೇ, ಸಿಎಂ ಸರ್ವಾಧಿಕಾತಿ ಧೋರಣೆಯಿಂದ ಬಿಜೆಪಿ ಪ್ರತಿಭಟನೆ ಹತ್ತಿಕ್ಕುವ ಯತ್ನ ನಡೆದಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಸೇರಿದಂತೆ ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited