Untitled Document
Sign Up | Login    
Dynamic website and Portals
  
November 25, 2014

ಕಪ್ಪುಹಣ ಕುರಿತು ಚರ್ಚೆಗೆ ಒತ್ತಾಯ: ಟಿಎಂಸಿ, ಜೆಡಿಯು ಪ್ರತಿಭಟನೆ

ನವದೆಹಲಿ : ಕಪ್ಪುಹಣದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡುವಂತೆ ಒತ್ತಾಯಿಸಿ ಟಿಎಂಸಿ ಸದಸ್ಯರು ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಸಂಸತ್‌ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಹಲವು ವಿಘ್ನಗಳು ಎದುರಾಗಿವೆ. ಪ್ರಮುಖ ವಿಷಯಗಳಾದ ಕಪ್ಪುಹಣ, ಸಿಬಿಐ ಮುಖ್ಯಸ್ಥರ ನೇಮಕ, ವಿಮಾ ತಿದ್ದುಪಡಿ ಮಸೂದೆಗಳಿಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಕಪ್ಪುಹಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಜೆಡಿಯು ಸಂಸದರು, ಕಪ್ಪುಹಣದ ಬಗ್ಗೆ ವಿಸ್ತೃತ ಚರ್ಚೆ ನಡೆಸಲು ರಾಜ್ಯ ಸಭೆಯಲ್ಲಿ ಪ್ರಶ್ನೋತ್ತರ ವೇಳೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿವೆ.

ಸಮಾಜವಾದಿ ಪಕ್ಷದ ಹಿರಿಯ ನಾಯಕರೊಬ್ಬರು ಪ್ರಶ್ನೋತ್ತರ ವೇಳೆ ರದ್ದು ಮಾಡದಿದ್ದರೆ, ಸಂಸತ್‌ನ ಉಭಯ ಸದನಗಳಲ್ಲಿ ಇತರೆ ಯಾವುದೇ ವಿಷಯದ ಚರ್ಚೆಗೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇನ್ನು ಪ್ರಶ್ನೋತ್ತರ ವೇಳೆ ರದ್ದು ಮಾಡುವಂತೆ ಆಗ್ರಹಿಸಿ ಟಿಎಂಸಿ ಸಂಸದರು ಸಂಸತ್‌ನ ಹೊರಗಡೆ ಪ್ರತಿಭಟನೆ ಆರಂಭಿಸಿದ್ದಾರೆ. ಟಿಎಂಸಿ ನಾಯಕರು ಸಂಸತ್ ಪ್ರವೇಶಕ್ಕೆ ಅಡ್ಡಿಪಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

100 ದಿನದಲ್ಲಿ ಕಪ್ಪು ಹಣವನ್ನು ವಾಪಸ್ ತರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರಮಾಣ ಮಾಡಿದೆ. ಆದರೆ 200 ದಿನ ಕಳೆದರೂ ಅದು ಸಾಧ್ಯವಾಗಿಲ್ಲ. ಹೀಗಾಗಿ ಅದಕ್ಕೆ ಈಗ ಉತ್ತರ ನೀಡಬೇಕು ಟಿಎಂಸಿ ನಾಯಕ ಸುಖೆಂದು ಶೇಖರ್ ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited