Untitled Document
Sign Up | Login    
Dynamic website and Portals
  
November 25, 2014

ನೆರೆ ರಾಷ್ಟ್ರಗಳ ಜತೆ ಉತ್ತಮ ಸಂಬಂಧಕ್ಕೆ ಆದ್ಯತೆ: ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ : ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಿ ಅಭಿವೃದ್ಧಿ ಸಾಧಿಸುವುದೇ ತಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪ್ರಾರಂಭವಾಗಲಿರುವ ಸಾರ್ಕ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದೇನೆ. ಇದರಿಂದ ದಕ್ಷಿಣ ಏಷ್ಯಾ ರಾಷ್ಟ್ರಗಳ ಜತೆ ಉತ್ತಮ ಸಂಬಂಧ ಹೊಂದಿ ದೇಶವನ್ನು ಅಭಿವೃದ್ಧಿಪಡಿಸುವುದು ತಮ್ಮ ಯೋಜನೆ ಎಂದರು.

ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ನಾವು ಜನರನ್ನು ತಲುಪಲು ಅನುಕೂಲವಾಗುತ್ತದೆ. ಇದರಿಂದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಭಯೋತ್ಪಾದನಾ...
ನಿಗ್ರಹ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ನ.26ರಿಂದ ಆರಂಭವಾಗಲಿರುವ ಸಾರ್ಕ್ ಶೃಂಗಸಭೆಯಲ್ಲಿ ದಕ್ಷಿಣ ಏಷ್ಯಾದ ಎಂಟು ರಾಷ್ಟ್ರಗಳ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ದಕ್ಷಿಣ ಏಷ್ಯಾದಲ್ಲಿ ಪ್ರಾದೇಶಿಕ ಸಮಗ್ರತೆಗೆ ಒತ್ತು ನೀಡಲು ಆದ್ಯತೆ ನೀಡಲಾಗುವುದು. ಈ ಪ್ರದೇಶದಲ್ಲಿ ಶಾಂತಿ ನೆಲೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ, ಆರ್ಥಿಕ ಅಭಿವೃದ್ಧಿಯೇ ಮೂಲಮಂತ್ರ ಎಂದು ಹೇಳಿದರು.

ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೆಲವು ಒಪ್ಪಂದಗಳ ಬಗ್ಗೆ ಚರ್ಚೆ ನಡೆಯಲಿದೆ. ಭಾರತವು ಎಲ್ಲ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಿ ಅಭಿವೃದ್ಧಿ ಸಾಧಿಸಲು ಕಾತರವಾಗಿದೆ. ನೆರೆಯ ರಾಷ್ಟ್ರಗಳ ಜತೆ ವಿಶ್ವಾಸ ವೃದ್ಧಿಸುವುದು ಕೂಡ ಪ್ರಮುಖ ಗುರಿ ಎಂದು ವಿವರಿಸಿದರು.

ಎರಡು ದಿನಗಳ ಕಾಲ ನಡೆಯಲಿರುವ ಸಾರ್ಕ್ ಶೃಂಗಸಭೆಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಭೂತಾನ್, ಮಾಯನ್ಮಾರ್, ನೇಪಾಳ ಸೇರಿದಂತೆ ಒಟ್ಟು ಎಂಟು ರಾಷ್ಟ್ರಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited