Untitled Document
Sign Up | Login    
Dynamic website and Portals
  
November 28, 2014

ಶಿವಸೇನೆ ಮನವೊಲಿಕೆಗೆ ಮುಂದಾದ ಬಿಜೆಪಿ ನಾಯಕರು

ಮುಂಬೈ : 'ದೇವೇಂದ್ರ ಫಡ್ನವೀಸ್' ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಶಿವಸೇನೆಯನ್ನು ಸೇರಿಸಿಕೊಳ್ಳುವ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ಮುಖಂಡ ಉದ್ಧವ್ ಠಾಕ್ರೆಯೊಂದಿಗೆ ಚರ್ಚೆ ನಡೆಸಲಿದ್ದಾರೆ.

ಬಿಜೆಪಿ ನಾಯಕರಾದ ದೇವೇಂದ್ರ ಪ್ರಧಾನ್, ಚಂದ್ರಕಾಂತ್ ಪಾಟೀಲ್ ಅವರು ಶಿವಸೇನೆ ಯೊಂದಿಗೆ ಮಾತುಕತೆ ನಡೆಸಿ ದೇವೇಂದ್ರ ಫಡ್ನವೀಸ್ ಸರ್ಕಾರವನ್ನು ಸೇರುವಂತೆ ಮನವೊಲಿಕೆ ಮಾಡಲಿದ್ದಾರೆ.

ಶಿವಸೇನೆ ಬಿಜೆಪಿ ಸರ್ಕಾರ ಸೇರಬೇಕೆಂಬುದು ಉಭಯ ಪಕ್ಷಗಳ ಕಾರ್ಯಕರ್ತರ ಒತ್ತಾಯ ಮಾತ್ರವಲ್ಲ, ಇದು ರಾಜ್ಯದ ಜನತೆಯ ಅಭಿಪ್ರಾಯವೂ ಹೌದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹೇಳಿದ್ದರು.

ಇತ್ತೀಚೆಗಷ್ಟೇ ಎನ್.ಸಿ.ಪಿ ಮಧ್ಯಂತರ ಚುನಾವಣೆ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಶಿವಸೇನೆ ಎನ್.ಸಿ.ಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. ಈ ಮೂಲಕ ಬಿಜೆಪಿ ಸರ್ಕಾರದ ಬೆಂಬಲಕ್ಕೆ ನಿಂತಿತ್ತು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಶಿವಸೇನೆ-ಬಿಜೆಪಿ ಮೈತ್ರಿ ಮಾಡುವ ಲಕ್ಷಣ ಕಂಡುಬಂದಿತ್ತು. ಇದೀಗ ಶಿವಸೇನೆ ಸಹ ಬಿಜೆಪಿ ಸರ್ಕಾರ ಸೇರಲು ಆಸಕ್ತಿ ತೋರಿದ್ದು ಈ ಸಂಬಂಧ ಉಭಯ ಪಕ್ಷಗಳ ನಡುವೆ ಮಾತುಕತೆ ನಡೆಯಲಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಸಂಬಂಧ ಮಾತುಕತೆ ವಿಫಲವಾದ ಕಾರಣ 25 ವರ್ಷಗಳ ಸುದೀರ್ಘ ಮೈತ್ರಿ ಮುರಿದು ಬಿದ್ದಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited