Untitled Document
Sign Up | Login    
Dynamic website and Portals
  
November 28, 2014

ಜಮ್ಮು-ಕಾಶ್ಮೀರದಲ್ಲಿ 30 ವರ್ಷದಲ್ಲಿ ಸಾಧ್ಯವಾಗದ್ದನ್ನು 5 ವರ್ಷಗಳಲ್ಲಿ ಮಾಡುತ್ತೇವೆ-ಮೋದಿ

ನರೇಂದ್ರ ಮೋದಿ ನರೇಂದ್ರ ಮೋದಿ

ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದಲ್ಲಿ ವಂಶಾಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನ.28ರಂದು ಜಮ್ಮು-ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಕೈಗೊಂಡ ಮೋದಿ, ಇಲ್ಲಿಯ ನಾಯಕರು ಕೇವಲು ಭ್ರಷ್ಟಾಚಾರ ಮತ್ತು ಭಾವನಾತ್ಮಕ ಬ್ಲಾಕ್‌ಮೇಲ್ ಮಾಡುವುದರಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ.

ದೇಶದಲ್ಲಿ ಹಲವು ಪ್ರಧಾನಿಗಳು ಬಂದು ಹೋಗಿದ್ದಾರೆ. ಆದರೆ ಯಾರೋಬ್ಬರು ಜಮ್ಮು-ಕಾಶ್ಮೀರಕ್ಕೆ ಎರಡು ಬಾರಿ ಭೇಟಿ ನೀಡಿಲ್ಲ. ಆದರೆ ನಾನು ಬಂದಿದ್ದೇನೆ. ರಾಜ್ಯದ ಜನತೆ ಅಭಿವೃದ್ಧಿಗಾಗಿ ಬಿಜೆಪಿಗೆ ಸಂಪೂರ್ಣ ಬಹುಮತ ನೀಡಿ ಎಂದು ಕರೆ ನೀಡಿದ್ದಾರೆ. 'ಪ್ರವಾಹ ಸಂತ್ರಸ್ಥರೊಂದಿಗೆ ನಾನು ದೀಪಾವಳಿ ಆಚರಿಸಲು ನಿರ್ಧರಿಸಿದೆ. ಆದರೆ ನನ್ನ ಈ ನಿರ್ಧಾರದ ಹಿಂದೆ ಯಾವುದೇ ರಾಜಕೀಯ ಅಥವಾ ಮತ ಗಳಿಸುವ ಉದ್ದೇಶ ಇಲ್ಲ' ಎಂದು ಮೋದಿ ತಿಳಿಸಿದ್ದಾರೆ.

ಕಳೆದ 30 ವರ್ಷಗಳಲ್ಲಿ ಮಾಡದ ಅಭಿವೃದ್ಧಿಯನ್ನು ನಾನು ಕೇವಲು ಐದು ವರ್ಷಗಳಲ್ಲಿ ಮಾಡುತ್ತೇನೆ. ಒಂದು ವೇಳೆ ಮಾಡದಿದ್ದರೇ ಅದಕ್ಕೆ ನನ್ನನ್ನೇ ಹೊಣೆಗಾರನಾಗಿ ಮಾಡಿ ಮತ್ತು ಏಕೆ ಮಾಡಿಲ್ಲ ಎಂದು ಪ್ರಶ್ನಿಸಿ ಎಂದು ಪ್ರಧಾನಿ ಹೇಳಿದರು.

ಕೇಂದ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿರುವುದು ದೇಶ ಅಭಿವೃದ್ಧಿಯಾಗಲು ಸಹಕಾರಿಯಾಗಿದೆ. ಅಂತೆಯೇ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ನೀಡಿ ಎಂದು ರಾಜ್ಯದ ಜನತೆಗೆ ಮೋದಿ ಕರೆ ನೀಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited