Untitled Document
Sign Up | Login    
Dynamic website and Portals
  
November 29, 2014

ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಎರಡು ಹೊಸ ಘಟಕ

ಕಾರವಾರ : ಕೈಗಾದ ಅಣು ವಿದ್ಯುತ್ ಕೇಂದ್ರದ 5ನೇ ಮತ್ತು 6ನೇ ಘಟಕನಿರ್ಮಾಣ ಕಾಮಗಾರಿಯ ಮೊದಲ ಹಂತ 2016ನಲ್ಲಿ ಆರಂಭವಾಗಲಿದ್ದು, ಅದೇ ವರ್ಷ ಡಿಸೆಂಬರ್‌ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕೈಗಾ ಅಣು ವಿದ್ಯುತ್ ಕೇಂದ್ರದ ನಿರ್ದೇಶಕ ಎಚ್.ಎನ್.ಭಟ್ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕೈಗಾ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರಲ್ಲಿ 700 ಮೆಗಾವ್ಯಾಟ್ ಸಾಮರ್ಥ್ಯದ 5ನೇ ಮತ್ತು 6ನೇ ಘಟಕ ಆರಂಭಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಸದ್ಯ ಇರುವ ನಾಲ್ಕು ಘಟಕಗಳಿಂದ ಉತ್ಪಾದನೆ ಆಗುತ್ತಿರುವ 780 ಮೆ.ವ್ಯಾ.ವಿದ್ಯುತ್‌ನಲ್ಲಿ ರಾಜ್ಯಕ್ಕೆ ಶೇ.28 ವಿದ್ಯುತ್ ಪೂರೈಕೆ ಆಗುತ್ತಿದೆ. ಮುಂದಿನ ಎರಡು ಘಟಕ ಕಾರ್ಯಾರಂಭದ ನಂತರ ರಾಜ್ಯಕ್ಕೆ ಶೇ.50ರಷ್ಟು ವಿದ್ಯುತ್ ಲಭಿಸಲಿದೆ ಎಂದು ತಿಳಿಸಿದರು.

ಘಟಕದ ಆರಂಭಕ್ಕೆ ಕೇಂದ್ರ ಪರಿಸರ ಮಂತ್ರಾಲಯಕ್ಕೆ ಪರವಾನಗಿ ಕೋರಲಾಗಿದೆ. ರಾಜ್ಯ ಸರ್ಕಾರವೂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಹಕಾರ ನೀಡುವುದಾಗಿ ತಿಳಿಸಿದೆ. ಕೈಗಾ ಪ್ರದೇಶದಲ್ಲಿ ಮುಂದಿನ ಎರಡು ಘಟಕಗಳಿಗಾಗಿ ಸ್ಥಳ ಗೊತ್ತುಪಡಿಸಲಾಗಿದೆ. ಮಣ್ಣಿನ ಪರೀಕ್ಷೆ, ವಾತಾವರಣ ಅಧ್ಯಯನ ಮುಂತಾದ ಬಹಳಷ್ಟು ಪರೀಕ್ಷೆಗಳು ನಡೆಯುತ್ತಿವೆ. 5ನೇ ಮತ್ತು 6ನೇ ಘಟಕದಿಂದ ಉತ್ಪಾದನೆ ಆಗುವ ವಿದ್ಯುತ್ ಸರಬರಾಜಿಗಾಗಿ ಹೊಸ ಮಾರ್ಗಗಳನ್ನು ಆರಂಭಿಸುವ ಅಥವಾ ಈಗಿರುವ ಮಾರ್ಗದಲ್ಲೇ ಸರಬರಾಜು ಸಾಧ್ಯವಾಗಿಸುವ ಬಗ್ಗೆ ಜಿಪಿಸಿ ಅಧ್ಯಯನ ನಡೆಸುತ್ತಿದೆ ಎಂದರು.

ಕೈಗಾ ಅಧಿಕಾರಿ ಎಚ್.ಕೆ.ಸುಬ್ರಹ್ಮಣ್ಯ, ಎನ್‌ಪಿಸಿಐಎಲ್ ಕೈಗಾ ಬಗ್ಗೆ ಜನರಲ್ಲಿ ತಪ್ಪು ತಿಳುವಳಿಕೆ ಇದೆ. ಅಣು ವಿದ್ಯುತ್ ಕೇಂದ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ವಿಕಿರಣ ಬಿಡುಗಡೆಯಾಗುತ್ತದೆ ಹಾಗೂ ಇದರಿಂದ ಹೆಚ್ಚು ಕ್ಯಾನ್ಸರ್ ಹರಡುತ್ತದೆ ಎಂಬ ವದಂತಿ ಹೆಚ್ಚಾಗಿ ಹಬ್ಬಿದೆ. ಆದರೆ, ಕೈಗಾದಲ್ಲಿ ವಿಕಿರಣ ಸೋರಿಕೆಯಂತಹ ಯಾವುದೇ ಅವಘಡ ನಡೆಯುವ ಸಾಧ್ಯತೆ ಇಲ್ಲ. ನೈಸರ್ಗಿಕವಾಗಿ ಬಿಡುಗಡೆಯಾಗುವ ವಿಕಿರಣ ಪ್ರಮಾಣ ಹೋಲಿಸಿದರೆ ಅಣುವಿದ್ಯುತ್ ಕೇಂದ್ರದಿಂದ ಹೊರ ಹೊಮ್ಮುವ ವಿಕಿರಣ ಪ್ರಮಾಣ ತೀರಾ ಕಡಿಮೆ ಇರುತ್ತದೆ ಎಂದರು. ವಾತಾವರಣದಲ್ಲಿ ಬಿಡುಗಡೆಯಾಗುವ ವಿಕಿರಣದ ಬಗ್ಗೆ ನಿರಂತರವಾಗಿ ಕಾರವಾರ ನಗರ ಹಾಗೂ ಬೆಂಗಳೂರಿನಲ್ಲಿ ಪರಿಸರ ಸಮೀಕ್ಷೆ ನಡೆಯುತ್ತಿರುತ್ತದೆ. ಹೀಗಾಗಿ ಜನ ಆತಂಕ ಪಡುವ ಯಾವುದೇ ಅಗತ್ಯವಿಲ್ಲ ಎಂದು ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited