Untitled Document
Sign Up | Login    
Dynamic website and Portals
  
November 29, 2014

ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ : ಸಂತೋಷ್ ಹೆಗಡೆ

ದಾವಣಗೆರೆ : ಭ್ರಷ್ಟಾಚಾರ ವ್ಯವಸ್ಥೆಗೆ ಕಡಿವಾಣ ಹಾಕುವ ಕರ್ನಾಟಕ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಬೇಸರ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಭುವನೇಶ್ವರಿ ದೇವಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆಸಿದೆ. ಇದಕ್ಕೆ ಅವಕಾಶ ಕೊಡಬೇಡಿ. ಹೋರಾಟ ಮಾಡಿಯಾದ್ರೂ ಉಳಿಸಿಕೊಳ್ಳಿ ಎಂದು ಕರೆ ನೀಡಿದರು.

ಈಗಾಗಲೇ ಲೋಕಾಯುಕ್ತ ಸಂಸ್ಥೆ ಮುಚ್ಚುವ ಕರಡು ಪ್ರತಿ ಸಿದ್ಧಗೊಂಡಿದೆ. ಅದು ಕೆಲ ದಿನಗಳಲ್ಲೇ ವಿಧಾನಮಂಡಲದಲ್ಲಿ ಚರ್ಚೆಗೆ ಬರಲಿದೆ ಎಂದರು. ಐದು ವರ್ಷಗಳ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಹುದ್ದೆ ನನಗೆ ಜೀವನದ ನೈಜತೆ ಕಲಿಸಿದೆ. ಕೆಳವರ್ಗದ ಜನರ ಕಷ್ಟ-ನೋವುಗಳಿಗೆ ಸ್ಪಂದಿಸುವ ಅವಕಾಶ ಕಲ್ಪಿಸಿತ್ತು. ಸಂವಿಧಾನಾತ್ಮಕವಾಗಿ ಸ್ಥಾಪನೆಗೊಂಡ ಸರ್ಕಾರವೇ ಜನರಿಗೆ ಅನ್ಯಾಯವೆಸಗುವುದನ್ನು ಕಂಡಿದ್ದೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಅನ್ಯಾಯದ ವಿರುದ್ಧ ಹೋರಾಟ ಮಾಡಲು ಇರುವ ಪ್ರಮುಖ ಅಸ್ತ್ರವೊಂದು ಕೈ ತಪ್ಪಲಿದೆ. ಇದರ ಜನಪರ ನಾಯಕ ಶಕ್ತಿಯನ್ನು ತೆಗೆದು ಹಾಕಲು ಸರ್ಕಾರ ಮುಂದಾಗಿದೆ. ಭ್ರಷ್ಟಾಚಾರ ತಡೆಯಲು ಹೊಸ ಸಂಸ್ಥೆಯನ್ನು ಕಟ್ಟುತ್ತಿದ್ದಾರೆ. ಇದಕ್ಕೆ ಅವಕಾಶ ನೀಡದೆ ಪ್ರಸ್ತುತ ಲೋಕಾಯುಕ್ತವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಜನರ ಮೇಲಿದೆ ಎಂದರು.

ಇಂದು ಸಮಾಜ ಶ್ರೀಮಂತಿಕೆ ಮತ್ತು ಅಧಿಕಾರವನ್ನು ಪೂಜಿಸುತ್ತಿದೆ. ಪ್ರಾಮಾಣಿಕತೆ ಮತ್ತು ಮಾನವೀಯತೆ ಇಲ್ಲವಾಗಿದೆ. ಇದರಿಂದಾಗಿ ಸಮಾಜ ಅಧೋಗತಿಗೆ ಕುಸಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited