ನವದೆಹಲಿ : ನಿಗದಿತ ದಿನದೊಳಗೆ ಚುನಾವಣೆಯಲ್ಲಿ ನೀವು ಮಾಡಿದ ಖರ್ಚಿನ ವಿವರ ಕೊಡಿ. ಇಲ್ಲದಿದ್ದರೆ ನಿಮಗೆ ನೀಡಲಾಗಿರುವ ಮಾನ್ಯತೆ ರದ್ದು ಮಾಡಬೇಕಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ 20 ಪಕ್ಷಗಳಿಗೆ ಎಚ್ಚರಿಕೆ ನೀಡಿ, ನೋಟಿಸ್ ಜಾರಿ ಮಾಡಿದೆ.
ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ, ಆಮ್ ಆದ್ಮ ಪಕ್ಷಗಳು ನೋಟಿಸ್ ಪಡೆದುಕೊಂಡ ಪ್ರಮುಖ ಪಕ್ಷಗಳಾಗಿವೆ.
ಇತ್ತೀಚೆಗೆ ಮುಕ್ತಾಯವಾದ ವಿಧಾನಸಭೆ ಮತ್ತು ಕಳೆದ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಈ ಎಲ್ಲಾ ಪಕ್ಷಗಳಿಗೆ ಲೆಕ್ಕಪತ್ರ ನೀಡುವಂತೆ ಆಯೋಗ ಸೂಚನೆ ನೀಡಿತ್ತು. ಆದರೆ ಈ ಬಗ್ಗೆ ಯಾವುದೇ ಪಕ್ಷಗಳು ಪ್ರತಿಕ್ರಿಯೆ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ 15 ದಿನಗಳಲ್ಲಿ ಮಾಹಿತಿ ನೀಡದಿದ್ದರೆ ಮಾನ್ಯತೆ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದೆ.