ಬೆಂಗಳೂರು : ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ವಿಧಾನಮಂಡಲ ಅಧಿವೇಶನಕ್ಕೂ ಮೊದಲು ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಕೇಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮದ ಬಗ್ಗೆ ಮಾಹಿತಿ ಸಿಗುತ್ತಿದೆ. ಕಳಂಕಿತ ನಾಲ್ವರು ಸಚಿವರ ಜತೆ ಡಿ.ಕೆ.ಶಿವಕುಮಾರ್ ಹೆಸರೂ ಸೇರ್ಪಡೆಯಾಗಿದೆ ಎಂದು ಕಿಡಿಕಾರಿದರು.
ಬಾತ್ ರೂಂ ಗೆ ಹೋದ ಕಾಂಗ್ರೆಸ್ಸಿಗರು ಬೆತ್ತಲಾಗಿ ಬರುತ್ತಿದ್ದಾರೆ. ಟವೆಲ್ ಇಲ್ಲದೇ ಬರಿದಾಗಿ ಬರುತ್ತಿರುವ ಕೆಟ್ಟ ಪರಿಸ್ಥಿತಿ ಬಂದಿದೆ ಅಷ್ಟರಮಟ್ಟಿಗೆ ಕಾಂಗ್ರೆಸ್ ಸಚಿವರ ಭ್ರಷ್ಟಾಚಾರ ಬಯಲಾಗಿದೆ ಎಂದು ಲೇವಡಿ ಮಾಡಿದರು.
ಕಳಂಕಿತರ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿದ್ದು, ಬಿಜೆಪಿ ಹೋರಾಟವನ್ನು ಹತ್ತಿಕ್ಕುವ ಯತ್ನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಆದರೆ ಬಿಜೆಪಿ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ ಎಂದ ಎಂದು ಗುಡುಗಿದ ಅವರು, ಬೆಳಗಾವಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುವುದಾಗಿ ತಿಳಿಸಿದರು.