ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದಲ್ಲಿ ಉಗ್ರರ ದಾಳಿ ಹೆಚ್ಚುತ್ತಿರುವಂತೆಯೇ ಡಿ.8ರಂದು ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯಿಂದ ಜೀವ ಬೆದರಿಕೆ ಇರುವುದಾಗಿ ಭದ್ರತಾ ಸಂಸ್ಥೆ&id=16489'>ಭದ್ರತಾ ಸಂಸ್ಥೆ ಎಚ್ಚರಿಕೆ ನೀಡಿದೆ.
ಭದ್ರತಾ ಸಂಸ್ಥೆ&id=16489'>ಭದ್ರತಾ ಸಂಸ್ಥೆಗಳ ಎಚ್ಚರಿಕೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ತೀವ್ರಗೊಂಡಿದ್ದು, ಇತ್ತೀಚಿನ ವರದಿ ಪ್ರಕಾರ, ತ್ರಾಲ್ ಬಸ್ ನಿಲ್ದಾಣದ ಬಳಿ ಗ್ರೆನೇಡ್ ಸ್ಫೋಟಗೊಂಡಿದೆ. ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಹೆಚ್ಚಿದ್ದು ಈ ವರೆಗೂ 10 ಯೋಧರು ಸಾವನ್ನಪ್ಪಿದ್ದು 6 ಉಗ್ರರನ್ನು ಸೇನಾಪಡೆ ಹತ್ಯೆಮಾಡಿದೆ.
ಡಿ.5ರಂದು ಬೆಳಿಗ್ಗೆ ಪ್ರಾರಂಭವಾದ ಉಗ್ರರು-ಯೋಧರ ನಡುವಿನ ಗುಂಡಿನ ದಾಳಿ, ಇನ್ನೂ ಮುಂದುವರೆದಿದೆ. ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯನ್ನು ವಿಫಲಗೊಳಿಸುವುದಾಗಿ ಉಗ್ರರು ಬೆದರಿಕೆ ಹಾಕಿದ್ದರು. ಮೊದಲ ಎರಡು ಹಂತದ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ. ಆದರೆ 3ನೇ ಹಂತದ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಉಗ್ರರ ಉಪಟಳ ಹೆಚ್ಚಾಗಿದೆ.
ಲಷ್ಕರ್-ಎ.ತೋಯ್ಬಾ ಉಗ್ರ ಸಂಘಟನೆ ತನ್ನ ದಾಳಿಯಲ್ಲಿ ಪ್ರಧಾನಿ ಮೋದಿ ಅವರನ್ನು ಗುರಿಯಾಗಿರಿಸಿಕೊಂಡಿದೆ ಈ ಹಿನ್ನೆಲೆಯಲ್ಲಿ ಡಿ.8ರಂದು ನಡೆಯಲಿರುವ ಮೋದಿ ರ್ಯಾಲಿಗೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.