Untitled Document
Sign Up | Login    
Dynamic website and Portals
  
December 8, 2014

ಇಬ್ಬರು ನಕ್ಸಲರು ಶರಣಾಗತಿ

ಚಿಕ್ಕಮಗಳೂರು : ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿದ್ದ ನಕ್ಸಲ್ ಮುಖಂಡರಾದ ಸಿರಿಮನೆ ನಾಗರಾಜ ಹಾಗೂ ನೂರ್ ಜುಲ್ಫೀಕರ್ ಅವರು ಶರಣಾಗಿದ್ದಾರೆ.

ಸಿರಿಮನೆ ನಾಗರಾಜನೂರ್ ಜುಲ್ಫೀಕರ್ ನಕ್ಸಲ್ ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಇಬ್ಬರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಶೇಖರಪ್ಪ ಅವರೆದುರು ಶರಣಾಗತರಾಗಿದ್ದಾರೆ. ಈ ವೇಳೆ ಜಿಲ್ಲಾ ವರಿಷ್ಠಾಧಿಕಾರಿ ಆರ್. ಚೇತನ್ ಸೇರಿದಂತೆ ನಾಗರಿಕ ಸಮಾಜದ ಪ್ರತಿನಿಧಿಗಳು, ಪುನರ್ವಸತಿ ಸಮಿತಿಯ ರಾಜ್ಯ ಮತ್ತು ಜಿಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹಾಗೂ ಬಿ.ಟಿ ಲಲಿತಾನಾಯಕ್ ಸೇರಿಂದಂತೆ ಪ್ರಮುಖರು ನಕ್ಸಲರ ಶರಣಾಗತಿ ಕುರಿತಂತೆ ಬೆಳಿಗ್ಗಿನಿಂದಲೂ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited