ಚೆನ್ನೈ : ವೈಕೋ ನೇತೃತ್ವದ ಎಂಡಿಎಂಕೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಿಂದ ಹೊರ ಬಂದಿದೆ ಎಂದು ಎನ್ನಲಾಗುತ್ತಿದೆ.
ಕಳೆದ ಲೋಕಸಭೆ ಚುನಾವಣೆ ವೇಳೆ ಎನ್ಡಿಎ ಮೈತ್ರಿಕೂಟ ಸೇರಿದ್ದ ಎಂಡಿಎಂಕೆ, ಇಂದು ಜಿಲ್ಲಾ ಕಾರ್ಯದರ್ಶಿಗಳ ಸಭೆ ನಡೆಸಿ ಎನ್ಡಿಎ ಮೈತ್ರಿಕೂಟದಿಂದ ಹೊರ ಬರುವ ನಿರ್ಣಯ ಕೈಗೊಂಡಿದೆ. ಅಲ್ಲದೆ ಭಾರತ, ಶ್ರೀಲಂಕಾಗೆ ಬೆಂಬಲ ನೀಡಬಾರದು ಎಂದು ಪಕ್ಷದ ಮುಖ್ಯಸ್ಥ ವೈಕೋ ಅವರು ನಿರ್ಣಯವನ್ನು ಮಂಡಿಸಿದ್ದಾರೆ.
ಇದೇ ವೇಳೆ ಶ್ರೀಲಂಕಾ ತಮಿಳರ ವಿಷಯಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಸರ್ಕಾರ ತಮಿಳರಿಗೆ ಮೋಸ ಮಾಡಿದೆ ಮತ್ತು ಕೇಂದ್ರ ಸರ್ಕಾರ ತಮಿಳು ವಿರೋಧಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವೈಕೋ ಆರೋಪಿಸಿದ್ದಾರೆ.