Untitled Document
Sign Up | Login    
Dynamic website and Portals
  
December 9, 2014

ಮೊಬೈಲ್ ಒನ್‌ ಸೇವೆಗೆ ರಾಷ್ಟ್ರಪತಿ ಚಾಲನೆ

BW News Bureau : ದೇಶದಲ್ಲೇ ಮೊದಲ ಬಾರಿಗೆ 'ಕರ್ನಾಟಕ ಮೊಬೈಲ್ ಒನ್‌' ಸೇವೆಗೆ ರಾಷ್ಪ್ರಪತಿ ಪ್ರಣಬ್ ಮುಖರ್ಜಿ ಚಾಲನೆ ನೀಡಿದ್ದಾರೆ.

ನಾಲ್ಕುವರೆ ಸಾವಿರಕ್ಕೂ ಅಧಿಕ ಸೇವೆಗಳನ್ನು ಹೊಂದಿರುವ ಮೊಬೈಲ್ ಓನ್ ಸೇವೆಯನ್ನು ರಾಜ್ಯಪಾಲ ವಿ.ಆರ್.ವಾಲ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಗರದ ಅಂತಾರಾಷ್ಟ್ರೀಯ ಪ್ರದರ್ಶನ ಸಭಾಂಗಣದಲ್ಲಿ ಸೋಮವಾರ ರಾಷ್ಪ್ರಪತಿ ಪ್ರಣಬ್ ಮುಖರ್ಜಿ ಉದ್ಘಾಟಿಸಿದರು.

ದೆಹಲಿಯಲ್ಲಿ 'ಡಿಜಿಟಲ್ ಇಂಡಿಯಾ' ಘೋಷಣೆಯಾಗಿದೆ, ಆದರೆ ಬೆಂಗಳೂರನ್ನು ದೆಹಲಿ ಸೇರಿದಂತೆ ಇತರ ನಗರಗಳು ಅನುಸರಿಸಬೇಕು ಎಂಬ ಘೋಷಣೆಯಾಗಿದೆ, ಆದರೆ ಬೆಂಗಳೂರನ್ನು ದೆಹಲಿ ಸೇರಿದಂತೆ ಇತರ ನಗರಗಳು ಅನುಸರಿಸಬೇಕು ಎಂಬ ಘೋಷಣೆಯೊಂದಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಲೋಕಾರ್ಪಣೆಯಾಗಿದೆ.

ಆಡಳಿತವು ಸುಲಲಿತವಾಗಿ ಸಾಗಲು ಕಾನೂನು ಪಾಲನೆ, ಸರ್ಕಾರದ ನಿರ್ಧಾರಗಳಲ್ಲಿ ಸಾರ್ವಜನಿಕರ ಪಾತ್ರ, ಜವಾಬ್ದಾರಿ, ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಅತಿ ಮುಖ್ಯವಾದದ್ದು, ಯಶಸ್ವಿ ಇ-ಆಡಳಿತದಿಂದ ಇದನ್ನು ಸಾಧಿಸಿಲು ಸಾಧ್ಯವಿದೆ. ಇದರ ಜತೆಗೆ ಕೇಂದ್ರ ಸರ್ಕಾರವು ಸ್ವಚ್ಛತಾ ಆಂದೋಲನ, ಆದರ್ಶ ಗ್ರಾಮ ಯೋಜನೆ ಹಾಗೂ ಡಿಜಿಟಲ್ ಇಂಡಿಯಾ ಪರಿಕಲ್ಪನೆ ಮೂಲಕ ದೇಶದ ಜನ ಹಾಗೂ ರಾಜ್ಯ ಸರ್ಕಾರಕ್ಕೆ ಹೊಸ ಅವಕಾಶಗಳನ್ನು ನೀಡಿದೆ ಎಂದು ರಾಷ್ಪ್ರಪತಿ ತಿಳಿಸಿದ್ದಾರೆ.

ತಂತ್ರಜ್ಞಾನ ಲಾಭ ಪಡೆದು ಸಿದ್ದರಾಮಯ್ಯ ಅವರು ಜನಪರವಾದ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಇದುರ ಅವರ ಆಡಳಿತ ವೈಖರಿ ತೋರಿಸುತ್ತದೆ. ರಾಜ್ಯದಲ್ಲಿರುವ ಸಾಮಾರ್ಥ್ಯವನ್ನು ಉಪಯೋಗಿಸಿಕೊಂಡು ಕಾರ್ಯರೂಪಕ್ಕೆ ತರುವುದು ನಾಯಕತ್ವದ ಲಕ್ಷಣ, ಸರ್ಕಾರ ಹೇಳಿದ್ದನ್ನು ಮಾಡಿ ತೋರಿಸಿದೆ ಎಂದು ರಾಜ್ಯಪಾಲ ವಿ.ಆರ್.ವಾಲಾ ಹೊಗಳಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited