ಜಾರ್ಖಂಡ್ : ದೆಹಲಿಯಲ್ಲಿರುವ ತಮ್ಮ ನೇತೃತ್ವದ ಎನ್.ಡಿ.ಎ ಸರ್ಕಾರ ಬಡವರ ಅಭಿವೃದ್ಧಿಗಾಗಿ ಕೆಲಸ ಮಾಡುವ ಸರ್ಕಾರ, ಕಳೆದ 6ತಿಂಗಳಿನಿಂದ ಎನ್.ಡಿ.ಎ ಸರ್ಕಾರ ಜನ್-ಧನ್ ಯೋಜನೆ ಸೇರಿದಂತೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಜಾರ್ಖಂಡ್ ನಲ್ಲಿ ಡಿ.9ರಂದು ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ಪ್ರಧಾನಿ ಮೋದಿ, ತಮ್ಮ ಪಕ್ಷವನ್ನು ಖಂಡಿಸಲು ವಿರೋಧ ಪಕ್ಷಗಳಿಗೆ ಯಾವುದೇ ವಿಷಯ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ನಮ್ಮ ಪಕ್ಷವನ್ನು ಟೀಕಿಸಲು ವಿರೋಧ ಪಕ್ಷಗಳಿಗೆ ಯಾವುದೇ ವಿಷಯ ಸಿಗುತ್ತಿಲ್ಲ. ಇದರಿಂದಾಗಿ ವಿರೋಧ ಪಕ್ಷದ ನಾಯಕರು ಅಸಮಾಧಾನರಾಗಿದ್ದಾರೆ ಎಂದು ಮೋದಿ ಪ್ರತಿಪಕ್ಷಗಳನ್ನು ಟೀಕಿಸಿದ್ದಾರೆ.
ದೇಶದ ಜನತೆ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವ ಮೂಲಕ ಅಭಿವೃದ್ಧಿಗಾಗಿ ಮತ ಚಲಾಯಿಸಿದ್ದಾರೆ. ನೀವೂ ಬಿಜೆಪಿಗೆ ಮತ ನೀಡಿ ರಾಜ್ಯ ಅಭಿವೃದ್ಧಿಗಾಗಿ ಬಿಜೆಪಿ ದುಡಿಯಲಿದೆ ಎಂದು ಅರೆ ನೀಡಿದ್ದಾರೆ. ಜಾರ್ಖಂಡ್ ಸಂಪತ್ಭರಿತ ರಾಜ್ಯವಾಗಿದೆ. ಆದರೂ ರಾಜ್ಯ ಅಭಿವೃದ್ಧಿಯಾಗಿಲ್ಲ ಬಿಜೆಪಿಗೆ ಮತ ನೀಡುವ ಮೂಲಕ ತಮ್ಮ ಕೆಲಸಗಳನ್ನು ಪೂರ್ಣಗೊಳಿಸುವಂತೆ ಕಟ್ಟಾಜ್ಞೆ ಮಾಡಿ, ನಿಮ್ಮ ಆಜ್ಞೆಯನ್ನು ಬಿಜೆಪಿ ಪಾಲಿಸಲಿದೆ ಎಂದು ಮೋದಿ ತಿಳಿಸಿದ್ದಾರೆ.