ರಾಂಚಿ : 'ಜಾರ್ಖಂಡ್'ನ ಚೈಬಾಸಾ ಜೈಲಿನಲ್ಲಿ 5 ಖೈದಿಗಳನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಎನ್ ಕೌಂಟರ್ ಮೂಲಕ ಖೈದಿಗಳನ್ನು ಹತ್ಯೆ ಮಾಡಿದ್ದಾರೆ.
ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿದ್ದ ಖೈದಿಗಳ ವಿಚಾರಣೆ ಮುಗಿಸಿ ಕೋರ್ಟ್ ನಿಂದ ಜೈಲಿಗೆ ಕರೆ ತರಬೇಕಾದರೆ 15 ಮಂದಿ ವಿಚಾರಣಾಧೀನ ಕೈದಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು ಐವರು ಖೈದಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಚಾರಣಾಧೀನ ಒಟ್ಟು 54 ಕೈದಿಗಳನ್ನು ಸ್ಥಳೀಯ ಕೋರ್ಟ್ ಗೆ ಹಾಜರುಪಡಿಸಿ ಪೊಲೀಸ್ ವಾಹನದಲ್ಲಿ ಅವರನ್ನು ಚೈಬಾಸಾ ಜೈಲಿಗೆ ಕರೆ ತರಲಾಗಿತ್ತು. ಈ ವೇಳೆ ಖೈದಿಯೊಬ್ಬ ಪೊಲೀಸರ ಮೇಲೆ ಖಾರದ ಪುಡಿ ಎರೆಚಿದ್ದು, 15 ಮಂದಿ ಖೈದಿಗಳು ಮೊದಲ ಗೇಟ್ನ ಮೂಲಕ ಪರಾರಿಯಾಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಜೈಲು ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿ ಐವರು ಮೃತಪಟ್ಟಿದ್ದು, ಉಳಿದಂತೆ 1೦ ಮಂದಿ ಪರಾರಿಯಾಗಿದ್ದಾರೆ.
ಕೂಡಲೇ ಖೈದಿಗಳ ಬಂಧನಕ್ಕೆ ತಂಡವನ್ನು ರಚಿಸಿದ್ದು, ಪರಾರಿಯಾಗಿರುವ ಕೈದಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.