Untitled Document
Sign Up | Login    
Dynamic website and Portals
  
December 10, 2014

ಸಿದ್ದರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ಬಿ.ಎಸ್.ವೈ

ಯಡಿಯೂರಪ್ಪ ಯಡಿಯೂರಪ್ಪ

ಬೆಳಗಾವಿ : ಸಿದ್ಧರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದ್ದು, ಇದರ ವಿರುದ್ಧ ಮುಂದಿನ ಐದಾರು ತಿಂಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುವರ್ಣವಿಧಾನಸೌಧ ಸಮೀಪದ ಕೊಂಡಸಕೊಪ್ಪ ಗ್ರಾಮದಲ್ಲಿ ಬಿಜೆಪಿ ಏರ್ಪಡಿಸಿದ್ದ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಗೂ ಭ್ರಷ್ಟ ಸಚಿವರನ್ನು ತೊಲಗಿಸಿ ಸಮಾವೇಶದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿಲ್ಲ, ಬದಲಾಗಿ ಸಿಎಂ ಸಿದ್ಧರಾಮಯ್ಯ ಗುಂಪಿನ ತುಘಲಕ್ ಸರ್ಕಾರ ಅಧಿಕಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವ ಮೂಲಕ ಸರ್ಕಾರವನ್ನು ಕಿತ್ತು ಹಾಕಲಿದೆ ಎಂದು ಗುಡುಗಿದರು.

ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ ರು.400 ಕೋಟಿ ವೆಚ್ಚ ಮಾಜಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿದೆ. ಆದರೆ ಕಾಂಗ್ರೆಸ್ ಸುವರ್ಣ ಸೌಧವನ್ನು ನಿರ್ಲಕ್ಷಿಸುತ್ತಿದೆ. ರಾಜ್ಯ ಸರ್ಕಾರ ಪ್ರತಿ ವರ್ಷ ಮಂಡಿಸುವ ಬಜೆಟ್‌ನಲ್ಲಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ರು.5,000 ಕೋಟಿ ತೆಗೆದಿಡಬೇಕು. ಸರ್ಕಾರ ಘೋಷಿಸಿದಂತೆ ಪ್ರತಿ ಟನ್ ಕಬ್ಬಿನ ರು. 2,650ಗಳನ್ನು ಸರ್ಕಾರವೇ ರೈತರ ಖಾತೆಗೆ ಜಮಾ ಮಾಡುವ ಮೂಲಕ ಕಬ್ಬು ಬೆಳೆಗಾರರ ಬೇಡಿಕೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಸಿಎಂ ಜಗದೀಶ ಶೆಟ್ಟರ್ ಮಾತನಾಡಿ ಸಿಎಂ ಸಿದ್ಧರಾಮಯ್ಯ ಅವರದ್ದು ಹೇಡಿ ಸರ್ಕಾರ. ಅದು ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಮತ್ತು ಮರಳು ಮಾಫಿಯಾದಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆಸಿದ್ದಲ್ಲದೇ, ಬಿಜೆಪಿ ಸರ್ಕಾರದಲ್ಲಿ ಜಾರಿಗೊಳಿಸಿ ಎಲ್ಲ ಜನಪರ ಯೋಜನೆಗಳನ್ನು ಸ್ಥಗಿತಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited