Untitled Document
Sign Up | Login    
Dynamic website and Portals
  
December 10, 2014

ಯಾವುದೇ ಭೂ ಕಬಳಿಕೆ ಮಾಡಿಲ್ಲ : ಕೃಷ್ಣಪ್ಪ

ಬೆಂಗಳೂರು : ನಾನು ಯಾವುದೇ ಭೂ ಕಬಳಿಕೆ ಮಾಡಿಲ್ಲ, ಅಕ್ರಮವನ್ನೂ ಎಸಗಿಲ್ಲ. ರಾಜಕೀಯ ದ್ವೇಷದಿಂದ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರು ಈ ಮೊದಲೇ ನಾನು ನಿರ್ದೋಷಿ ಎಂದು ಹೇಳಿದ್ದಾರೆ. ಭೂಮಿ ಒತ್ತುವರಿ ಮಾಡಿಲ್ಲ. ಈ ಮೊದಲೇ ನಾನು ಅಗತ್ಯ ದಾಖಲೆಗಳನ್ನು ನೀಡಿದ್ದೇನೆ ಎಂದರು. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ಹುರುಳಿಲ್ಲ. ನಾನು ನಿರ್ದೋಷಿ ಎಂದು ಸ್ಪಷ್ಟಪಡಿಸಿದರು.

ಉತ್ತರಹಳ್ಳಿ ಗ್ರಾಮದ ಸರ್ವೆ ನಂ.103/2ರಲ್ಲಿ 39 ಗುಂಟೆ ಮತ್ತು ಸರ್ವೆ ನಂ.103/1ರಲ್ಲಿ 36ಗುಂಟೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಅಕ್ರಮವಾಗಿ ಕೈ ಬಿಟ್ಟ ಆರೋಪ ಶಾಸಕ ಎಂ.ಕೃಷ್ಣಪ್ಪ ಅವರ ಮೇಲಿತ್ತು. ಅಲ್ಲದೆ ಜಮೀನಿನಲ್ಲಿ ಅಕ್ರಮವಾಗಿ ಬಹುಮಹಡಿ ವಸತಿ ಸಂಕೀರ್ಣ ನಿರ್ಮಿಸಿದ್ದಾರೆ ಎಂದು ಕೂಡ ಆರೋಪಿಸಲಾಗಿತ್ತು.

ಈ ಬಗ್ಗೆ ಪತ್ರಕರ್ತೆ ನಾಗಲಕ್ಷ್ಮಿಬಾಯಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲೋಕಾಯುಕ್ತರು ಎಂ.ಕೃಷ್ಣಪ್ಪ ಅವರಿಗೆ ಪತ್ರ ಬರೆದು ಅಕ್ರಮಗಿ ಭೂಮಿ ಒತ್ತುವರಿ ಮಾಡಿರುವುದು ಸಾಬೀತಾಗಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ ಕೃಷ್ಣಪ್ಪ. ನಾನು ನಿರ್ದೋಷಿ. ನಾನು ಯಾವುದೇ ಭೂಮಿಯನ್ನು ಒತ್ತುವರಿ ಮಾಡಿಲ್ಲ. ಅಕ್ರಮವಾಗಿ ಕಟ್ಟಡವನ್ನೂ ಕಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited