ನವದೆಹಲಿ : ಎಂ.ಎನ್.ಸಿ ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರವೆಸಗಿರುವ ಯೂಬರ್ ಕ್ಯಾಬ್ ಚಾಲಕ ಶಿವಕುಮಾರ್ ಯಾದವ್ ನನ್ನು ದೆಹಲಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅತ್ಯಾಚಾರದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಶಿವಕುಮಾರ್ ಯಾದವ್ ನನ್ನು ಡಿ.11ರಂದು ಸ್ಥಳೀಯ ನ್ಯಾಯಾಲಯದ ನ್ಯಾಯಾಮೂರ್ತಿ ರವೀಂದ್ರ ಕುಮಾರ್ ಪಾಂಡೆ ಎದುರು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಡಿಸೆಂಬರ್ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.
ಅತ್ಯಾಚಾರವೆಸಗಿದ್ದರೂ ಯಾವುದೇ ಪಶ್ಚಾತ್ತಾಪ ಪಡದ ಶಿವಕುಮಾರ್ ಯಾದವ್, ಪೊಲೀಸ್ ವಿಚಾರಣೆ ವೇಳೆ ತಾನು ಕಾಮದೇವನ ಅವತಾರ ಎಂದು ಹೇಳಿಕೊಂಡಿದ್ದಾನೆ. ಆರೋಪಿಯ ಈ ಹೇಳಿಕೆ ಹಾಸ್ಯಕ್ಕೆ ಗುರಿಯಾಗಿದೆ.
ಉತ್ತರ ಪ್ರದೇಶದ ಮಥರಾ ನಗರದ ಯೂಬರ್ ಕ್ಯಾಬ್ ಚಾಲಕ ಶಿವಕುಮಾರ್ ಯಾದವ್ ಡಿ.7ರ ರಾತ್ರಿ ಎಂಎನ್ಸಿ ಮಹಿಳಾ ಉದ್ಯೋಗಿ ಮೇಲೆ ಯ್ಯೂಬರ್ ಕ್ಯಾಬ್ನಲ್ಲಿ ಅತ್ಯಾಚಾರವೆಸಗಿದ್ದ. ಆರೋಪಿ ಶಿವಕುಮಾರ್ ಯಾದವ್ ನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು