ಕೋಲ್ಕತ್ತ : ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಾರಿಗೆ ಸಚಿವ ಮದನ್ ಮಿತ್ರ ಅವರನ್ನು ಸಿ.ಬಿ.ಐ ಡಿ.12ರಂದು ಬಂಧಿಸಿದೆ.
ಸುದೀರ್ಘ ವಿಚಾರಣೆಯ ಬಳಿಕ ಮದನ್ ಮಿತ್ರಾ ಅವರನ್ನು ಸಿ.ಬಿ.ಐ ಅಧಿಕಾರಿಗಳು ಬಂಧಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮದನ್ ಮಿತ್ರ ಅವರಿಗೆ ಕಳೆದ ತಿಂಗಳು ಸಿಬಿಐ ನೊಟೀಸ್ ಜಾರಿ ಮಾಡಿತ್ತು. ಡಿ.12ರಂದಿ ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ಮದನ್ ಮಿತ್ರ ಸಿ.ಬಿ.ಐ ಬಂಧಕ್ಕೊಳಗಾಗಿದ್ದಾರೆ.
ಹಗರಣದ ಸಂಬಂಧ ಈಗಾಗಲೇ ಬಂಧನಕ್ಕೊಳಗಾಗಿ ವಿಚಾರಣೆ ಎದುರಿಸುತ್ತಿರುವ ಟಿಎಂಸಿ ಸಂಸದ ಕುನಾಲ್ ಘೋಷ್ ನೀಡಿರುವ ಮಾಹಿತಿ ಆಧಾರದಲ್ಲಿ ಮದನ್ ಮಿತ್ರಾ ಅವರನ್ನು ವಿಚಾರಣೆಗೊಳಪಡಿಸಿತ್ತು. ಮದನ್ ಮಿತ್ರಾ ಅವರೊಂದಿಗೆ ಟಿಎಂಸಿಯ ಇಬ್ಬರು ಸಂಸದರನ್ನೂ ಬಂಧಿಸಲಾಗಿದೆ.
ಮದನ್ ಮಿತ್ರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದಾರೆ. ಸಚಿವರ ಬಂಧನವಾಗಿರುವುದು ತೃಣಮೂಲ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಶಾರದಾ ಚಿಟ್ ಫಂಡ್ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರು ಬಂಧನಕ್ಕೊಳಗಾಗುತ್ತಿದ್ದಾರೆ.