Untitled Document
Sign Up | Login    
Dynamic website and Portals
  
December 14, 2014

ನಮ್ಮ ಸಹೋದರನನ್ನು ನಿಮ್ಮ ಬಳಿ ಇರಲು ಬಿಡಲ್ಲ: ಮೆಹ್ದಿ ಬಂಧನಕ್ಕೆ ಇಸಿಸ್ ಎಚ್ಚರಿಕೆ

ಬೆಂಗಳೂರು : ಟ್ವೀಟ್ ಉಗ್ರ ಮೆಹ್ದಿ ಬಂಧನಕ್ಕೆ ವಿರುದ್ಧವಾಗಿ ಸೇಡು ತೀರಿಸಿಕೊಳ್ಳುವುದಾಗಿ ಇಸಿಸ್, ಅಪರಾಧ ವಿಭಾಗದ ಡಿಸಿಪಿ ಅಭಿಷೇಕ್ ಗೋಯಲ್ ಅವರಿಗೆ ಎಚ್ಚರಿಕೆ ನೀಡಿದೆ. ಟ್ವಿಟರ್ ಮೂಲಕವೇ ಈ ಕುರಿತು ಇಸಿಸ್ ಉಗ್ರ ಅಬೌನ್‌ಫಾಲ್ ಅಲ್ಮಾಘ್ರಿಬಿ ಎಚ್ಚರಿಕೆ ನೀಡಿದ್ದಾರೆ.

ಅಭಿಷೇಕ್ ಗೋಯಲ್ ಅವರಿಗೆ ರೀಟ್ವೀಟ್ ಮಾಡಿರುವ ಆತ, ನಿಮ್ಮ ಬಂಧನದಲ್ಲಿರುವ ನಮ್ಮ ಸಹೋದರರನ್ನು ನಿಮ್ಮ ಬಳಿಯೇ ಇರಲು ಬಿಡುವುದಿಲ್ಲ. ಇದಕ್ಕೆ ಬದಲಾಗಿ ನಾವು ಸೇಡು ತೀರಿಸಿಕೊಳ್ಳುತ್ತೇವೆ. ಕಾದು ನೋಡಿ ಎಂದಿದ್ದಾನೆ. ನಮ್ಮ ಪ್ರತಿಕ್ರಿಯೆ ಹೇಗಿರುತ್ತೆ ಎಂಬುದನ್ನು ನೀವೇ ನೋಡಿ ಎಂದಿದ್ದಾನೆ.

ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಅಂಡ್ ಸಿರಿಯಾ ಉಗ್ರ ಸಂಘಟನೆಯ ಹೆಸರಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ದೇಶದ್ರೋಹಿ ಸಂದೇಶಗಳನ್ನು ಹಾಕುತ್ತಿದ್ದ ಟ್ವಿಟರ್ ಖಾತೆದಾರ ಮೆಹ್ದಿಯನ್ನು ಶನಿವಾರ ಬಂಧಿಸಲಾಗಿತ್ತು. ಉಗ್ರನ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಗಳೂರಿನ ಜಾಲಹಳ್ಳಿಯಲ್ಲಿ ಬಂಧಿಸಿದ್ದರು. ಇಸಿಸ್ ಹೆಸರಲ್ಲಿ ಪ್ರಕಟವಾಗುತ್ತಿದ್ದ ಟ್ವಿಟರ್ ಖಾತೆಯ ಹಿಂದೆ ಬೆಂಗಳೂರು ಮೂಲದ ವ್ಯಕ್ತಿಯ ಕೈವಾಡವಿದೆ ಎಂದು ಬ್ರಿಟನ್ ಮೂಲದ ಚಾನೆಲ್ 4' ನ್ಯೂಸ್ ಸುದ್ದಿವಾಹಿನಿ ವರದಿ ಪ್ರಸಾರ ಮಾಡಿತ್ತು.

ಇಸಿಸ್ ಉಗ್ರ ಸಂಘಟನೆಯ ಹೆಸರಲ್ಲಿ ಶಮಿವಿಟ್ನೆಸ್ ಎಂಬ ಟ್ವಿಟರ್ ಖಾತೆ ನಿರ್ವಹಿಸುತ್ತಿದ್ದ ಮೆಹ್ದೀ ಮೂಲತಃ ಬೆಂಗಳೂರಿನ ಖಾಸಗಿ ಸಂಸ್ಥೆಯ ಉದ್ಯೋಗಿಯಂತೆ. ಸಂಸ್ಥೆಯಲ್ಲಿ ಉನ್ನತ ಹುದ್ದೆ ಹೊಂದಿದ್ದರೂ, ರಹಸ್ಯವಾಗಿ ಇಸ್ಲಾಮಿಕ್ ಸ್ಟೇಟ್ ಪರ ಕೆಲಸ ಮಾಡುತ್ತಿದ್ದನು. 2013ರಲ್ಲಿ ಶಮಿವಿಟ್ನೆಸ್ ಟ್ವಿಟರ್ ಖಾತೆಯನ್ನು ಮೆಹ್ದೀ ತೆರೆದಿದ್ದು, ಜಿಹಾದಿ ಕುರಿತ ಲೇಖನಗಳನ್ನು ಪ್ರಕಟಿಸುವ ಮೂಲಕ ಈ ಖಾತೆ ಭಾರಿ ಸುದ್ದಿಗೆ ಗ್ರಾಸವಾಗಿತ್ತು.

ಅಲ್ಲದೆ ಸಿರಿಯಾದ ಬಿಲಾದ್-ಅಲ್-ಶಾಮ್, ಜಿಹಾದಿ, ಆರ್ಥಿಕ ಬಿಕ್ಕಟ್ಟು, ತಂತ್ರಜ್ಞಾನ, ಇತಿಹಾಸಗಳ ಬಗ್ಗೆ ಬರೆಯುತ್ತಿದ್ದನು. ಇದಲ್ಲದೇ ಇರಾಕ್ ಮತ್ತು ಸಿರಿಯಾದಲ್ಲಿ ಆರಂಭಗೊಂಡಿರುವ ಬಿಕ್ಕಟ್ಟಿನ ಕುರಿತಂತೆ ಲೇಖನಗಳನ್ನು ಪ್ರಕಟಿಸುತ್ತಿದ್ದನು ಮತ್ತು ಇಸಿಸ್ ಸೇರುವಂತೆ ಯುವಕರನ್ನು ಪ್ರೇರೇಪಿಸುತ್ತಿದ್ದನು. ಒಂದು ಮೂಲದ ಪ್ರಕಾರ ಉಗ್ರ ಸಂಘಟನೆಗೆ ಆನ್‌ಲೈನ್ ಮೂಲಕವಾಗಿ ಅತಿದೊಡ್ಡ ಪ್ರಮಾಣದಲ್ಲಿ ಈತನೇ ನೇಮಕಾತಿ ಮಾಡುತ್ತಿದ್ದನು ಎಂದು ಚಾನೆಲ್ 4 ಹೇಳಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited