Untitled Document
Sign Up | Login    
Dynamic website and Portals
  
December 17, 2014

ಉಗ್ರರ ದಾಳಿ ಸಾಧ್ಯತೆ: ಗೃಹ ಇಲಾಖೆಯಿಂದ ಎಲ್ಲಾ ರಾಜ್ಯಗಳಲ್ಲಿ ಹೈಅಲರ್ಟ್ ಘೋಷಣೆ

ನವದೆಹಲಿ : 'ಸಿಡ್ನಿ', ಪಾಕಿಸ್ತಾನದಲ್ಲಿ ಉಗ್ರರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯಗಳಿಗೂ ಎಚ್ಚರಿಕೆ ನೀಡಿದೆ. ಎಲ್ಲಾ ರಾಜ್ಯಗಳ ಡಿಜಿಪಿ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಸಿಡ್ನಿ ಹಾಗೂ ಪೇಶಾವರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಉಲ್ಲೇಖಿಸಿರುವ ಕೇಂದ್ರ ಗೃಹ ಇಲಾಖೆ, ಇಂತಹ ಘಟನೆಗಳು ಭಾರತದಲ್ಲಿ ನಡೆಯದಂತೆ ಎಚ್ಚರ ವಹಿಸಬೇಕೆಂದು ಡಿಜಿಪಿಗಳಿಗೆ ಸೂಚನೆ ನೀಡಿದೆ. ಅಲ್ಲದೇ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿರುವ ಸಂದರ್ಭದಲ್ಲೇ ಭಾರತಕ್ಕೆ ಉಗ್ರರಿಂದ ದಾಳಿ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜನವರಿ ತಿಂಗಳ ಅಂತ್ಯದ ವರೆಗೂ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.

ಜೈಲಿನಿಂದ ತಪ್ಪಿಸಿಕೊಂಡಿರುವ ನಿಷೇಧಿತ ಸಿಮಿ ಉಗ್ರ ಸಂಘಟನೆ ಸದಸ್ಯರು ಹಾಗೂ ಪಾಕಿಸ್ತಾನಲಷ್ಕರ್-ಎ-ತೋಯ್ಬಾ ಸಂಘಟನೆ ಭಾರತದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿವೆ ಎಂದು ಈ ಹಿಂದೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು. ಇದೀಗ ಸಿಡ್ನಿ ಮತ್ತು ಪಾಕಿಸ್ತಾನದಲ್ಲಿ ದಾಳಿ ನಡೆದಿರುವುದರಿಂದ ಮತ್ತಷ್ಟು ಎಚ್ಚರಿಕೆ ವಹಿಸಲು ಗೃಹ ಇಲಾಖೆ ರಾಜ್ಯಗಳಿಗೆ ಸೂಚನೆ ನೀಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited