ಕೇರಳ : ಒತ್ತಾಯ ಪೂರ್ವಕ ಮತಾಂತರವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಬಲವಂತದ ಮತಾಂತರಕ್ಕೆ ಬಿಜೆಪಿಯ ವಿರೋಧವಿದ್ದು, ನಿಜವಾದ ಜಾತ್ಯಾತೀತತೆಯನ್ನು ಪ್ರತಿಪಾದಿಸುವ ಭಾರತದ ಎಲ್ಲಾ ಪಕ್ಷಗಳು ಮತಾಂತರ ನಿಷೇಧ ಕಾಯ್ದೆಯನ್ನು ಬೆಂಬಲಿಸಬೇಕು ಎಂದು ಕರೆ ನೀಡಿದ್ದಾರೆ.
ಒತ್ತಯ ಪೂರ್ವಕ ಮತಾಂತರವನ್ನು ವಿರೋಧಿಸಲು ಬಿಜೆಪಿ ಮತಾಂತರ ನಿಷೇಧ ಕಾಯ್ದೆಗೆ ಬೆಂಬಲಿಸುತ್ತದೆ. ಹಾಗೂ ಮತಾಂತರವನ್ನು ವಿರೋಧಿಸುವ ಸೆಕ್ಯುಲರ್ ಗಳೆಂದು ಕರೆಸಿಕೊಳ್ಳುವ ರಾಜಕೀಯ ಪಕ್ಷಗಳೆಂದು ಹೇಳಿಕೊಳ್ಳುವವರು ಮತಾಂತರ ನಿಷೇಧ ಕಾಯ್ದೆಗೆ ಬೆಂಬಲಿಸಲಿ ಎಂದು ಹೇಳಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ಬಗ್ಗೆ ಅಲ್ಪಸಂಖ್ಯಾತರೊಂದಿಗೆ ಚರ್ಚೆ ನಡೆಸಲು ಬಿಜೆಪಿ ಸಿದ್ಧವಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, ರಾಜಕೀಯ ಪಕ್ಷಗಳ ಒಮ್ಮತದ ನಂತರ ಸಾರ್ವಜನಿಕ ಚರ್ಚೆ ನಡೆಯಲಿ ಎಂದಿದ್ದಾರೆ.
ಬಿಜೆಪಿ ದೇಶವನ್ನು ಧರ್ಮಾಧಾರಿತವಾಗಿ ಒಡೆಯಲು ಮುಂದಾಗುತ್ತಿದೆ ಎಂಬ ರಾಹುಲ್ ಗಾಂಧಿ ಬಗ್ಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ಆರೋಪ ನಿರಾಧಾರ ಎಂದು ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗಷ್ಟೇ 57 ಮುಸ್ಲಿಂ ಕುಟುಂಬದವರು ಘರ್ ವಾಪಸಿ ಮೂಲಕ ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದರಿಂದ ಮತಾಂತರದ ವಿಷಯ ಚರ್ಚೆಗೆ ಗ್ರಾಸವಾಗಿದೆ. ಸಂಸತ್ ನಲ್ಲಿ ಘರ್ ವಾಪಸಿಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಮತಾಂತರ ನಿಷೇಧ ಕಾಯ್ದೆಗೆ ಬೆಂಬಲಿಸುವಂತೆ ಅಮಿತ್ ಶಾ ಹೇಳಿದ್ದಾರೆ.