ಇಂಫಾಲ್ : 'ಮಣಿಪುರ'ದ ರಾಜಧಾನಿ ಇಂಫಾಲ್ ನಲ್ಲಿ ಐಇಡಿ ಸ್ಫೋಟಗೊಂಡಿರುವ ಪರಿಣಾಮ 3 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳು ರಸ್ತೆ ಬದಿಯಲ್ಲಿ ಐಇಡಿ ಇಟ್ಟು ಸ್ಫೋಟಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಡಿ.21ರ ಬೆಳಿಗ್ಗೆ ನಡೆದ ಘಟನೆಯಲ್ಲಿ 4 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಐಇಡಿ ಸ್ಫೋಟದಲ್ಲಿ ಸಾವನ್ನಪ್ಪಿರುವವರನ್ನು ಶಿವ ಯಾದವ್(35), ಲೋಲನ್(35) ಕುಸುಮ್ ಪಂಡಿತ್(60) ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ನಾಲ್ವರು ಕಾರ್ಮಿಕರನ್ನು ಸ್ಥಳೀಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪುರದ ಮುಖ್ಯಮಂತ್ರಿ ಹಾಗೂ ಗೃಹ ಖಾತೆ ಸಚಿವರೂ ಆಗಿರುವ ಗೃಹ ಮಂತ್ರಿಗಳು ಘಟನೆಯನ್ನು ಖಂಡಿಸಿದ್ದು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಐಇಡಿ ಸ್ಫೋಟದಲ್ಲಿ ಸಾವನ್ನಪ್ಪಿರುವವರು ಮಣಿಪುರದ ಮೂಲದವರಲ್ಲ ಎಂದು ತಿಳಿದುಬಂದಿದೆ.