ನವದೆಹಲಿ : 'ಜಮ್ಮು-ಕಾಶ್ಮೀರ' ವಿಧಾನಸಭಾ ಚುನಾವಣೆಯಲ್ಲಿ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ತಾವು ಸ್ಪರ್ಧಿಸಿದ್ದ 2 ಕ್ಷೇತ್ರಗಳಲ್ಲಿ ಒಂದರಲ್ಲಿ ಸೋತಿದ್ದರೆ ಮತ್ತೊಂದರಲ್ಲಿ ಗೆಲುವು ಸಾಧಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದುಕೊಂಡು ಓಮರ್ ಅಬ್ದುಲ್ಲಾ, ಎರಡೆರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೂ ಒಂದರಲ್ಲಿ ಸೋಲುವ ಮೂಲಕ ಮುಖಭಂಗಕ್ಕೊಳಗಾಗಿದ್ದಾರೆ. ಸೋನಾವರ್ ಮತ್ತು ಬೀರ್ವಾ ವಿಧಾನಸಭಾ ಕ್ಷೇತ್ರಗಳಿಂದ ಓಮರ್ ಅಬ್ದುಲ್ಲಾ ಸ್ಪರ್ಧಿಸಿದ್ದರು.
ಸೋನಾವರ್ ಕ್ಷೇತ್ರದಲ್ಲಿ ಪಿಡಿಪಿ ಅಭ್ಯರ್ಥಿ ವಿರುದ್ಧ ಓಮರ್ ಅಬ್ದುಲ್ಲಾ ಸೋತಿದ್ದರೆ ಬೀರ್ವಾಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಾಗೂ ನರೇಂದ್ರ ಮೋದಿ ವಿರುದ್ಧ ಓಮರ್ ಅಬ್ದುಲ್ಲಾ ಭಾರಿ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನ-ಮಾನವನ್ನು ವಾಪಸ್ ಪಡೆದರೆ ಜಮ್ಮು-ಕಾಶ್ಮೀರ ಭಾರತದ ಭಾಗವಾಗಿರುವುದರ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ ಎಂದು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಎಚ್ಚರಿಸಿದ್ದರು. ಆದರೆ ಇದೀಗ ತಾವು ಸ್ಪರ್ಧಿಸಿದ್ದ ಎರಡು ಕ್ಷೇತ್ರಗಳ ಪೈಕಿ ಒಂದರಲ್ಲಿ ಮಾತ್ರ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.